ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ಮಹಾಸಭೆ, ರೂ. 4.48 ಕೋಟಿ ಪಾಲು ಬಂಡವಾಳ, ರೂ. 64.86 ಲಕ್ಷ ಲಾಭ

0

ಕಳಂಜ ಬಾಳಿಲ ಪ್ರಾ.ಕೃ.ಪ.ಸ.ಸಂಘದ ವಾರ್ಷಿಕ ಮಹಾಸಭೆ ಸೆ. 23ರಂದು ಸಂಘದ ಪ್ರಧಾನ ಕಚೇರಿ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಎಂ. ಕೂಸಪ್ಪ ಗೌಡ ಮುಗುಪ್ಪುರವರ ಅಧ್ಯಕ್ಷತೆಯಲ್ಲಿ ನಡೆಯಿತು.


ಸಂಘದ ಅಧ್ಯಕ್ಷ ಎಂ. ಕೂಸಪ್ಪ ಗೌಡ ಮುಗುಪ್ಪು ಪ್ರಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ್ ನಾಯಕ್ ತಡಗಜೆ ವರದಿ ವಾಚಿಸಿದರು. ಸಂಘದ ಉಪಾಧ್ಯಕ್ಷ ಕರುಣಾಕರ ಶೆಟ್ಟಿ ನಾಲ್ಗುತ್ತು, ನಿರ್ದೇಶಕರಾದ ಎನ್. ವಿಶ್ವನಾಥ ರೈ ಕಳಂಜ‌, ಬಿ. ಸುಭಾಶ್ಚಂದ್ರ ರೈ ತೋಟ, ಶ್ರೀಮತಿ ಮಾಲಿನಿ ಪ್ರಸಾದ್, ಮೇದಪ್ಪ ಗೌಡ ತಂಟೆಪ್ಪಾಡಿ, ಭಾರತೀಶಂಕರ ಆದಳ, ಕೆ.ಎಲ್. ಸುಬ್ರಹ್ಮಣ್ಯ ಕಾವಿನಮೂಲೆ, ಶ್ರೀಮತಿ ಪುಷ್ಪಾವತಿ ಬಾಳಿಲ, ಶ್ರೀಮತಿ ಪಂಕಜಾಕ್ಷಿ ಮರುವಂಜ, ಶುಭ ಕುಮಾರ್ ಬಾಳೆಗುಡ್ಡೆ, ಅಜಿತ್ ರಾವ್ ಕಿಲಂಗೋಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.