ಮಂಗಳೂರಿನಲ್ಲಿ ನಡೆದ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ಸೇವಂತ್ ನೆಡ್ಚಿಲು ದುರ್ಮರಣ

0

ಮಂಗಳೂರಿನ ಮಾರಿಪಳ್ಳ ಎಂಬಲ್ಲಿ ನಿನ್ನೆ ರಾತ್ರಿ ನಡೆದ ಅಪಘಾತದಲ್ಲಿ ಆಲೆಟ್ಟಿ ಗ್ರಾಮದ ನೆಡ್ಚಿಲು ವಾಸುದೇವ ಗೌಡ ರವರ ಪುತ್ರ ಇಂಜಿನಿಯರಿಂಗ್ ವಿದ್ಯಾರ್ಥಿ ಸೇವಂತ್ ನೆಡ್ಚಿಲು ದುರ್ಮರಣಕ್ಕೀಡಾದ ಘಟನೆ ವರದಿಯಾಗಿದೆ.


ಪುತ್ತೂರಿನಿಂದ ಮಂಗಳೂರು ಕಡೆಗೆ ಗೆಳೆಯರೊಂದಿಗೆ ಬೈಕಿನಲ್ಲಿ ಹೋಗುತ್ತಿರುವಾಗ ಮಾರಿಪಳ್ಳ ಎಂಬಲ್ಲಿ ಟಿಪ್ಪರ್ ಗೆ ಡಿಕ್ಕಿ ಹೊಡೆಯಿತು. ಪರಿಣಾಮವಾಗಿ ಸೇವಂತ್ ರವರು ರಸ್ತೆ ಮೇಲೆ ಬಿದ್ದು ಗಾಯಗೊಂಡರು. ಅಲ್ಲಿಂದ ಅವರನ್ನು ಮಂಗಳೂರಿನ ಯುನಿಟಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು.

ತಲೆಗೆ ವಿಪರೀತ ಏಟಾಗಿದ್ದರಿಂದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರೆಂದು ತಿಳಿದು ಬಂದಿದೆ. ಮೃತರು ತಂದೆ ವಾಸುದೇವ ಗೌಡ ನೆಡ್ಚಿಲು, ತಾಯಿ ಶೋಭಾ ನೆಡ್ಚಿಲು ಹಾಗೂ ಸಹೋದರ ಲೋಚನ್ ಮತ್ತು ಬಂಧು ಮಿತ್ರರನ್ನು ಅಗಲಿದ್ದಾರೆ.