ಪಯಸ್ವಿನಿ ಸಹಕಾರ ಸಂಘಕ್ಕೆ ಸ್ಕ್ಯಾಡ್ಸ್ ನಿಂದ ಸಮಗ್ರ ಪ್ರಶಸ್ತಿ

0

ದಕ್ಷಿಣ ಕನ್ನಡ ಜಿಲ್ಲಾ ಕೃಷಿ ಅಭಿವೃದ್ಧಿ ಸಹಕಾರ ಸಂಘದೊಂದಿಗೆ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಅತ್ಯಧಿಕ ಕೃಷಿ ಯಂತ್ರೋಪಕರಣಗಳ ವ್ಯವಹಾರ ಮಾಡಿದ ಸಂಪಾಜೆ ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಮಂಗಳೂರಿನಲ್ಲಿ ಸೆ.24ರಂದು ನಡೆದ ಸ್ಕ್ಯಾಡ್ಸ್ ಮಹಾಸಭೆಯಲ್ಲಿ ಸಮಗ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಸಂಘದ ಅದ್ಯಕ್ಷರಾದ ಶ್ರೀ ಅನಂತ್ ಊರುಬೈಲು ,ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಬಿ.ಕೆ.ಆನಂದ ಮತ್ತ ನಿರ್ದೇಶಕರಾದ ಶ್ರೀಮತಿ ವಾಣಿ ಜಗದೀಶ್ ರವರು ವೇದಿಕೆಯಲ್ಲಿ ಪ್ರಶಸ್ತಿ ಸ್ವೀಕರಿಸಿದರು.