ಕರಾಟೆ ಸ್ಪರ್ಧೆಯಲ್ಲಿ ಸೈಂಟ್ ಜೋಸೆಫ್ ವಿದ್ಯಾಸಂಸ್ಥೆ ವಿದ್ಯಾರ್ಥಿಗಳಿಗೆ ಜಿಲ್ಲಾಮಟ್ಟದ ಪ್ರಶಸ್ತಿ

0

ಸೆ. 25 ರಂದು ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಎಸ್.ಡಿ. ಎಮ್ ಮಂಗಳ ಜ್ಯೋತಿ ಸಮಗ್ರ ಶಾಲೆ ವಾಮಂಜೂರುನಲ್ಲಿ ನಡೆದ ದ.ಕ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸುಳ್ಯದ ಸೈಂಟ್ ಜೋಸೆಫ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಾದ ಶಮಂತ್ 8ನೇ ದ್ವಿತೀಯ ಸ್ಥಾನ, ತನಿಷ್ ದಯಾನಂದ 10ನೇ ತೃತೀಯ ಬಹುಮಾನ , ಚೈತನ್ಯ 9ನೇ ತೃತೀಯ ಬಹುಮಾನ , ಜಗನ್ 6ನೇ ತರಗತಿ ತೃತೀಯ ಬಹುಮಾನಗಳನ್ನು ಪಡೆದರು.

ಶಾಲಾ ಸಂಚಾಲಕರಾದ ರೆ. ಫಾ. ವಿಕ್ಟರ್ ಡಿ’ಸೋಜ, ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಮೇರಿ ಸ್ಟೆಲ್ಲಾ ರ ಮಾರ್ಗದರ್ಶನದಲ್ಲಿ, ದೈಹಿಕ ಶಿಕ್ಷಣ ಶಿಕ್ಷಕರಾದ ಕೊರಗಪ್ಪ ಬೆಳ್ಳಾರೆ, ಪುಷ್ಪವೇಣಿ ಸಹಕರಿಸಿದರು.