ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪರಿವಾರ ದೈವಗಳ ಜೀರ್ಣೋದ್ಧಾರ ಪ್ರಯುಕ್ತ ಭಕ್ತಾದಿಗಳಿಂದ ಶ್ರಮದಾನ

0

ಜಾಲ್ಸೂರು ಗ್ರಾಮದ ಅಡ್ಕಾರಿನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಪರಿವಾರ ದೈವಗಳ ಜೀರ್ಣೋದ್ಧಾರ ಕಾರ್ಯದ ಪ್ರಯುಕ್ತ ಭಕ್ತಾದಿಗಳ ನೇತೃತ್ವದಲ್ಲಿ ಶ್ರಮದಾನವು ಸೆ.29ರಂದು ಜರುಗಿತು.

ಶ್ರೀ ಕ್ಷೇತ್ರದ ಪರಿವಾರ ದೈವಗಳಲ್ಲಿ ಒಂದಾದ ಕಳರಿ ಧೂಮಾವತಿ ದೈವದ ಸಾನಿಧ್ಯದಲ್ಲಿ ಶ್ರಮದಾನ ಕಾರ್ಯ ನಡೆಸಲಾಯಿತು.

ಈ ಸಂದರ್ಭದಲ್ಲಿ ಸುಮಾರು ನೂರಕ್ಕೂ ಅಧಿಕ ಭಕ್ತಾದಿಗಳು, ಗ್ರಾಮಸ್ಥರು ಆಗಮಿಸಿ ಶ್ರಮಸೇವೆಯಲ್ಲಿ ಭಾಗವಹಿಸಿದ್ದರು