ಕಾಯರ್ತೋಡಿ: ವರದಾಯಿನಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶ್ರಮದಾನ

0

ಸುಳ್ಯ ನಗರದ ಕಾಯರ್ತೋಡಿ ವಿಷ್ಣುಸರ್ಕಲ್ ವರದಾಯಿನಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಭಕ್ತಾದಿಗಳಿಂದ ಶ್ರಮದಾನವು ಸೆ.29ರಂದು ನಡೆಯಿತು.

ಶ್ರಮಸೇವೆಯಲ್ಲಿ ಆಡಳಿತ ಮಂಡಳಿಯ ಅಧ್ಯಕ್ಷ ಡಿ.ಎಸ್. ಗಿರೀಶ್, ನಿವೃತ್ತ ಪ್ರಾಂಶುಪಾಲ ಕುಶಾಲಪ್ಪ ಡಿ.ಎಸ್., ಸಮಿತಿಯ ಸುರೇಶ್ ಕುದ್ಕುಳಿ, ಆಡಳಿತ ಮಂಡಳಿಯ ಪದಾಧಿಕಾರಿಗಳು, ಸೂರ್ತಿಲ ಶ್ರೀ ರಕ್ತೇಶ್ವರಿ ಕ್ಷೇತ್ರದ ಪದಾಧಿಕಾರಿಗಳು ಸೇರಿದಂತೆ ವಿವಿಧ ಸಂಘ -ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಮಹಿಳೆಯರು ಭಾಗವಹಿಸಿದ್ದರು.