ಪಂಜ: ಬೈಕ್ ಮೇಲೆ ಕಡವೆ ಜಿಗಿದು ಬೈಕ್ ಸವಾರ ಜಖಂ

0

ಕೂತ್ಕುಂಜ ಗ್ರಾಮದ ಜಳಕದಹೊಳೆ ಎಂಬಲ್ಲಿ ಕಡವೆ ಬೈಕ್ ಮೇಲೆ ಜಿಗಿದು ಬೈಕ್ ಸವಾರ ಗಾಯ ಗೊಂಡ ಘಟನೆ ಸೆ.29 ರಾತ್ರಿ ವರದಿಯಾಗಿದೆ.

ಕೂತ್ಕುಂಜ ಗ್ರಾಮದ ಬೇರ್ಯ ತಿರುಮಲೇಶ್ವರ ಗಾಯ ಗೊಂಡವರರು.
ಅವರು ಮನೆಯಿಂದ ಪಂಜ ಕಡೆ ಹೋಗುತ್ತಿದ್ದಾಗ ಗುತ್ತಿಗಾರು -ಪಂಜ ರಸ್ತೆಯ ಜಳಕದಹೊಳೆ ಎಂಬಲ್ಲಿ ಘಟನೆ ನಡೆದಿದೆ. ಅವರ ಕೈ,ಕಾಲು, ಭುಜದ ಭಾಗಕ್ಕೆ ತೀವ್ರ ಗಾಯವಾಗಿದ್ದು ಕಢಬದ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ಪಂಜ ಅರಣ್ಯ ಇಲಾಖೆಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.