ದೇವಚಳ್ಳ : ಶತಮಾನೋತ್ಸವ ಸಮಿತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರಿಂದ ಧರ್ಮಾಧಿಕಾರಿಯವರಿಗೆ ಸಹಾಯಧನಕ್ಕೆ ಮನವಿ

0

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವಚಳ್ಳ ಇದರ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ನೂತನವಾಗಿ ನಿರ್ಮಿಸಲ್ಪಡುವ ರಂಗಮಂದಿರ ಸಭಾಭವನ ಹಾಗೂ ಕೊಠಡಿಗಳ ನಿರ್ಮಾಣಕ್ಕಾಗಿ ಸಹಾಯಧನವನ್ನು ಯಾಚಿಸುವ ಸಲುವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಯಾದ ಡಾ. ವೀರೇಂದ್ರ ಹೆಗ್ಗಡೆ ಇವರನ್ನು ಶತಮಾನೋತ್ಸವ ಸಮಿತಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಶತಮಾನೋತ್ಸವ ಸಮಿತಿಯ ಅಧ್ಯಕ್ಷರಾದ ತೀರ್ಥರಾಮ ಅಂಬೆಕಲ್ಲು, ಕಾರ್ಯದರ್ಶಿಗಳು ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಧರ ಗೌಡ ಕೆ, ಶಾಲಾ ಎಸ್. ಡಿ.ಎಂ.ಸಿ. ಅಧ್ಯಕ್ಷರಾದ ಜಯಾನಂದ ಪಟ್ಟೆ, ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿಗಳಾದ ರಾಜಗೋಪಾಲ ಅಂಬೆಕಲ್ಲು, ಶತಮಾನೋತ್ಸವ ಸಮಿತಿಯ ಕಾರ್ಯದರ್ಶಿಗಳಾದ ಕಿರಣ್ ಗುಡ್ಡೆಮನೆ, ಪದಾಧಿಕಾರಿಗಳಾದ ಭಾಸ್ಕರ ಬಾಳೆತೋಟ, ರಾಜೇಶ್ ಬಟ್ಟಕಜೆ ಹಾಗೂ ಮಹೇಶ್ ಮೇನಾಲ ಉಪಸ್ಥಿತರಿದ್ದರು.