ಮಹಾರಾಷ್ಟ್ರದಲ್ಲಿ ಕರ್ನಾಟಕ ಸುವರ್ಣ ಸಂಭ್ರಮಾಚರಣೆ ಕಾರ್ಯಕ್ರಮ

0

ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಭಾಗಿ

ಕರ್ನಾಟಕ ಗಡಿ ಪ್ರದೇಶ ಅಭಿವ್ರದ್ಧಿ ಪ್ರಾಧಿಕಾರ ಹಾಗು ಕನ್ನಡ ಸಂಸ್ಕ್ತ್ರತಿ ಇಲಾಖೆ ಬೆಂಗಳೂರು ಇದರ ಆಶ್ರಯದಲ್ಲಿ ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಜತ್ತ ತಾಲೂಕಿನ ಗುಡ್ಡಾಪುರ ದಾನಮ್ಮದೇವಿ ದೇವಸ್ಥಾನ ದಲ್ಲಿ ಕರ್ನಾಟಕ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಕರ್ನಾಟಕ ಸುವರ್ಣ ಸಂಭ್ರಮ ೫೦ ಕಾರ್ಯಕ್ರಮದಲ್ಲಿ ಅರೆಭಾಷೆ ಸಂಸ್ಕ್ರತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ಇವರು ಮುಖ್ಯ ಅಥಿತಿಗಳಾಗಿ ಭಾಗವಹಿಸಿದ್ದರು.

ಸಮಾರಂಭದ ಉದ್ಗಾಟನೆಯನ್ನು ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಮಾನ್ಯ ಸಚಿವರಾದ ಶಿವರಾಜ ತಂಗಡಗಿ ಇವರು ಉದ್ಗಾಟಿಸಿದರು ಸ್ಥಳೀಯ ಶಾಸಕರಾದ ವಿಕ್ರಮ ಸಿಂಹ ಬಾಳಾ ಸಾಹೆಬ್ ಸಾವಂತ್, ಶಾಸಕ ಸಂಗಮೆಶ ಬಬಲೇಶ್ವರ , ಕನ್ನಡ ಸಂಸ್ಕ್ರತಿ ಇಲಾಖೆ ನಿರ್ದೇಶಕರಾದ ಶ್ರೀಮತಿ ಧರಣೀದೇವಿ ಮಾಲಗತ್ತಿ ಹಾಗು ಪ್ರಾಧಿಕಾರದ ಹಾಗು ಅಕಾಡೆಮಿ ಅಧ್ಯಕ್ಷರುಗಳು ಈ ಕಾರ್ಯಕ್ರಮದಲ್ಲಿ ಉಪಸ್ತಿತರಿದ್ದರು. ಹೊನ್ನ ಬಿತ್ತೇವು ಎಂಬ ಸಾಂಸ್ಕ್ರತಿಕ ಕಾರ್ಯಕ್ರಮದಲ್ಲಿ ಕರ್ನಾಟಕ ಅರೆಭಾಷೆ ಸಂಸ್ಕ್ರತಿ ಹಾಗು ಸಾಹಿತ್ಯ ಅಕಾಡೆಮಿ ಸದಸ್ಯರಾದ ‍ಚಂದ್ರಾವತಿ ಬಡ್ಡಡ್ಕ ಹಾಗು ಇನ್ನಿತರ ಕಲಾವಿದರು ಭಾಗವಹಿಸಿದ್ದರು.