ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ವತಿಯಿಂದ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಚತಾ ಕಾರ್ಯ

0


ಸುಳ್ಯ ತಾಲೂಕು ಮರಾಟಿ ಸಮಾಜ ಸೇವಾ ಸಂಘದ ವತಿಯಿಂದ ಮರಾಟಿ ಮಹಿಳಾ ವೇದಿಕೆ ಮತ್ತು ಯುವ ವೇದಿಕೆಯ ಸಹಯೋಗದಲ್ಲಿ ಮಹಾತ್ಮ ಗಾಂಧಿ ಮತ್ತು ಲಾಲ್ ಬಹುದ್ಧೂರ್ ಶಾಸ್ತ್ರಿ ಸ್ಮರಣೆ ಮತ್ತು ಗಿರಿದರ್ಶಿನಿ ಸಭಾಭವನದ ಪರಿಸರದಲ್ಲಿ ಸ್ವಚ್ಚತಾ ಕಾರ್ಯಕ್ರಮ ಇಂದು ನಡೆಯಿತು.


ಮರಾಟಿ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ನಾಯ್ಕ್ ಅಜ್ಜಾವರ ಗಾಂದೀಜಿ ಮತ್ತು ಶಾಸ್ತ್ರಿಯವರನ್ನು ಸ್ಮರಿಸಿ ಮಾತನಾಡಿದರು.


ಸಂಘದ ಗೌರವಾಧ್ಯಕ್ಷ ಜನಾರ್ದನ ಬಿ.ಕುರುಂಜಿಭಾಗ್, ಪ್ರ.ಕಾರ್ಯದರ್ಶಿ ರಮೇಶ್ ನೀರಬಿದಿರೆ, ಉಪಾಧ್ಯಕ್ಷೆ ಶ್ರೀಮತಿ ಸುಲೋಚನಾ, ಕಾರ್ಯಕಾರಿ ಸಮಿತಿ ಸದಸ್ಯರುಗಳಾದ ಜನಾರ್ದನ ನಾಯ್ಕ್ ಕೇರ್ಪಳ, ಶೋಭಾ ಎ.ಕೆ.ನಾಯ್ಕ್ ,ಮಹಿಳಾ ವೇದಿಕೆಯ ಅಧ್ಯಕ್ಷೆ ರೇವತಿ ದೊಡ್ಡೇರಿ, ಕಾರ್ಯದರ್ಶಿ ಶೋಭಾ ಬೆಳ್ಳಾರೆ, ಮೀನಾಕ್ಷಿ ಭಸ್ಮಡ್ಕ,ಯುವ ವೇದಿಕೆಯ ಗೌರವಾಧ್ಯಕ್ಷ ಮೋಹನ್ ಪೆರಾಜೆ, ಅಧ್ಯಕ್ಷ ಉದಯಕುಮಾರ್ ಮಾಣಿಬೆಟ್ಟು, ಕಾರ್ಯದರ್ಶಿ ಮಿಥುನ್ ನಾಯ್ಕ್,,ಮಹಿಳಾ ವೇದಿಕೆ ಮತ್ತು ಯುವ ವೇದಿಕೆಯ ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.


ಮಹಾತ್ಮಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.ಮಹಿಳಾ ವೇದಿಕೆಯ ಸದಸ್ಯರು ರಘುಪತಿ ರಾಘವ ರಾಜರಾಂ ಭಜನೆ ಹಾಡಿದರು. ಕಾರ್ಯದರ್ಶಿ ರಮೇಶ್ ನೀರಬಿದಿರೆ ನಿರೂಪಿಸಿದರು.ಗಿರಿದರ್ಶಿನಿ ಪರಿಸರವನ್ನು ಸ್ವಚ್ಚ ಮಾಡಲಾಯಿತು.