ಬಾಳಿಲ ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಶಾಸ್ತ್ರೀ ಜಯಂತಿ ಆಚರಣೆ

0

ಬಾಳಿಲ ವಿದ್ಯಾ ಬೋಧಿನೀ ಪ್ರೌಢಶಾಲೆಯಲ್ಲಿ ಗಾಂಧೀ ಜಯಂತಿ ಮತ್ತು ಶಾಸ್ತ್ರೀ ಜಯಂತಿ ಕಾರ್ಯಕ್ರಮಯನ್ನು ಅ. 2ರಂದು ಆಚರಿಸಲಾಯಿತು.

ವಿದ್ಯಾಬೋಧಿನೀ ಸ್ಕೌಟ್ – ಗೈಡ್ ದಳದಿಂದ ಸರ್ವಧರ್ಮ ಪ್ರಾರ್ಥನೆ ನಡೆಯಿತು. ವಿದ್ಯಾಬೋಧಿನೀ ಎಜ್ಯುಕೇಶನಲ್ ಸೊಸೈಟಿ ರಿ, ಬಾಳಿಲ ಇದರ ಅಧ್ಯಕ್ಷ
ರಾಧಾಕೃಷ್ಣರಾವ್ ಯು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಗಾಂಧೀಜಿ ಮತ್ತು ಶಾಸ್ತ್ರೀಯವರ ಸಾಧನೆಗಳನ್ನು ನೆನಪಿಸಿಕೊಂಡು ಸರ್ವಧರ್ಮ ಪ್ರಾರ್ಥನೆಯ ಮಹತ್ವವನ್ನು ತಿಳಿಸುತ್ತಾ, ದೇಶದ ಸಮಗ್ರತೆಗೆ ನಾವೆಲ್ಲ ಒಂದಾಗಬೇಕೆಂದು ವಿದ್ಯಾರ್ಥಿಗಳಿಗೆ ಸಂದೇಶವನ್ನು ನೀಡಿದರು.


ಪ್ರೌಢಶಾಲಾ ಮುಖ್ಯ ಶಿಕ್ಷಕ ಯಶೋಧರ ಎನ್ ಸ್ವಾಗತಿಸಿ, ಸಹ ಶಿಕ್ಷಕ ಉದಯಕುಮಾರ್ ರೈ ಎಸ್. ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ನಂತರ ಶಾಲಾ ಆವರಣದಲ್ಲಿ ಸ್ವಚ್ಛತೆಯ ಕಾರ್ಯಕ್ರಮವನ್ನು ಕೈಗೊಳ್ಳಲಾಯಿತು. ಕೊನೆಯಲ್ಲಿ
ಸಿಹಿ ತಿಂಡಿ ವಿತರಿಸಲಾಯಿತು.