ಅಡ್ತಲೆ‌: ಅಂಬೇಡ್ಕರ್ ರಕ್ಷಣಾ ವೇದಿಕೆ ಆರಂತೋಡು ಘಟಕದ ವತಿಯಿಂದ ಗಾಂಧಿಜಯಂತಿ ಆಚರಣೆ

0

ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಅಂಬೇಡ್ಕರ್ ರಕ್ಷಣಾ ವೇದಿಕೆ
ಅರಂತೋಡು ಘಟಕದ ವತಿಯಿಂದ ಅಂಬೇಡ್ಕರ್ ದಿನಾಚರಣೆ ಮತ್ತು ಸನ್ಮಾನ ಕಾರ್ಯಕ್ರಮ ನಡೆಯಿತು.‌

ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ನವೀನ್ ಕಲ್ಲುಗುಡ್ಡೆ ವಹಿಸಿದ್ದರು.

ಕಾರ್ಯಕ್ರಮವನ್ನು ಹಿರಿಯ ಯಕ್ಷಗಾನ ಕಲಾವಿದರು ಯುವರಾಜ್ ಜೈನ್ ದೀಪ ಬೆಳಗಿಸಿ ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ಧಾರ್ಮಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಹಾಗೂ ಹಿರಿಯ ಯಕ್ಷಗಾನ ಕಲಾವಿದ ಯುವರಾಜ ಜೈನ್ ಬಲ್ನಾಡುಪೇಟೆ, ನಿವೃತ್ತ ಪೊಲೀಸ್ ಅಧಿಕಾರಿ ಜಗನ್ನಾಥ್ ಕಾಯರ, ಹಿರಿಯರು ಪ್ರಗತಿಪರ ಕೃಷಿಕರಾದ ಎಲ್ಯಣ್ಣ ಅರಮನೆಗಯಾ ಇವರನ್ನು ಸಂಘಟನೆಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪರ್ಚನೆ ಮಾಡಲಾಯಿತು.

ನಿಶ್ಮಿತಾ ಮತ್ತು ಚೈತ್ರ ಪ್ರಾರ್ಥಿಸಿದರು. ತೇಜಕುಮಾರ್ ಅರಮನೆಗಯಾ ಸ್ವಾಗತಿಸಿದರು. ಚಂದ್ರಶೇಖರ ಕುಂಪುಲಿ ವಂದಿಸಿದರು. ಕಿಟ್ಟು ಅರಮನೆಗಯಾ ಕಾರ್ಯಕ್ರಮ ನಿರೂಪಿಸಿದರು.