ಸಂಪಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಗಾಂಧಿ ಜಯಂತಿ ಆಚರಣೆ – ಸ್ವಚ್ಛತಾ ಕಾರ್ಯ

0

ಸಂಪಾಜೆ ಪ.ಪೂ.ಕಾಲೇಜು ಹಾಗೂ ಲಯನ್ಸ್ ಕ್ಲಬ್ ಸಂಪಾಜೆ ಸಂಯುಕ್ತ ಆಶ್ರಯದಲ್ಲಿ 155ನೇ ಗಾಂಧಿ ಜಯಂತಿ ಹಾಗೂ 120ನೇ ಲಾಲ್ ಬಹಾದ್ಧೂರ್ ಶಾಸ್ತ್ರಿ ಜಯಂತಿಯನ್ನು ಅ.2ರಂದು ಆಚರಿಸಲಾಯಿತು.

ಸಂಸ್ಥೆಯ ಸಂಚಾಲಕ ಎಂ. ಶಂಕರ ನಾರಾಯಣ ಭಟ್ ಅವರು ಅಧ್ಯಕ್ಷತೆ ವಹಿಸಿದ್ದರು.

ಸಭೆಯಲ್ಲಿ ಆಡಳಿತ ಮಂಡಳಿಯ ಕಾರ್ಯಕಾರಿ ಸಮಿತಿಯ ನಿರ್ದೇಶಕರಾಗಿದ್ದು, ನಿಧನರಾದ ದಿ. ಜಯರಾಮ ಕೆ.ಎಸ್. ಅವರಿಗೆ ಶ್ರಧ್ಧಾಂಜಲಿ ಸಲ್ಲಿಸಲಾಯಿತು.

ಮುಖ್ಯ ಅಥಿತಿಗಳಾದ ಸಂಪಾಜೆ ಲಯನ್ಸ್ ಕ್ಲಬ್ ನ ಅಧ್ಯಕ್ಷೆ ಲ. ಪಾರ್ವತಿ ಎಂ. ರವರು ತಾಲೂಕು ಹಾಗೂ ಜಿಲ್ಲಾ ಮಟ್ಟದ ಕ್ರೀಡಾ ಬಹುಮಾನಗಳನ್ನು ವಿತರಿಸಿ ಮಾತನಾಡಿದರು. ಸಂಸ್ಥೆಯ ನಿಕಟಪೂರ್ವ ಸಂಚಾಲಕ ಹಾಗೂ ಪ್ರಸ್ತುತ ಹಿರಿಯ ನಿರ್ದೇಶಕ ಕೆ.ಎಸ್ ನಾರಾಯಣ ಭಟ್ ಅವರು ಕ್ರೀಡಾ ಪ್ರತಿಭೆಗಳಿಗೆ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಾಂಶುಪಾಲರು, ಮುಖ್ಯ ಶಿಕ್ಷಕರು, ಲಯನ್ಸ್ ಕ್ಲಬ್ ನ ಪದಾಧಿಕಾರಿಗಳು, ಬೋಧಕ-ಬೋಧಕೇತರರು ಹಾಗೂ ವಿದ್ಯಾರ್ಥಿಗಳುಾ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳು ಪ್ರಾರ್ಥಿಸಿ, ಪ್ರಾಂಶುಪಾಲ ಲೋಕ್ಯಾ ನಾಯಕ್ ರವರು ಸ್ವಾಗತಿಸಿದರು.

ಉಪನ್ಯಾಸಕಿ ಶ್ರೀಮತಿ ವಿನುತ ಕಾರ್ಯಕ್ರಮ ನಿರೂಪಣೆ ಮಾಡಿದರು. ಉಪನ್ಯಾಸಕಿ ಶ್ರೀಮತಿ ತಾಹಿರಾ ಪಿ.ಎ. ಅವರು ಕ್ರೀಡಾ ಬಹುಮಾನಗಳ ವಿತರಣಾ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಮುಖ್ಯಶಿಕ್ಷಕ ಎ. ಐತ್ತಪ್ಪ ವಂದಿಸಿದರು. ಸಭಾ ಕಾರ್ಯಕ್ರಮದ ನಂತರ ಶಾಲಾ ಪರಿಸರದ ಸ್ವಚ್ಛತಾ ಕಾರ್ಯದಲ್ಲಿ ಸರ್ವರೂ ಸಹಕರಿಸಿದರು.