ಕಾಯರ್ತೋಡಿ: ವರದಾಯಿನಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪ್ರಾರಂಭ

0

ಸುಳ್ಯ ನಗರದ ಕಾಯರ್ತೋಡಿ ವಿಷ್ಣುಸರ್ಕಲ್ ವರದಾಯಿನಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 21ನೇ ವರ್ಷದ ನವರಾತ್ರಿ – ವಿಜಯ ದಶಮಿ ಕಾರ್ಯಕ್ರಮವು ಅ.3ರಂದು ಆರಂಭಗೊಂಡಿತು.

ಅ.3ರಂದು ಬೆಳಿಗ್ಗೆ ಗಣಪತಿ ಹವನ ಜರುಗಿತು. ನವರಾತ್ರಿ ಪ್ರಯುಕ್ತ ಶ್ರೀ ದುರ್ಗಾಪರಮೇಶ್ವರಿ ದೇವಿಯ ಸನ್ನಿಧಿಯಲ್ಲಿ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಸೇವೆ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಡಿ.ಎಸ್. ಗಿರೀಶ್ ಸೇರಿದಂತೆ ಆಡಳಿತ ಮಂಡಳಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.