ಅರಂಬೂರಿ‌ನಲ್ಲಿ ಅರಂತೋಡು ಎನ್ನೆಂಸಿ ವಿದ್ಯಾರ್ಥಿಗಳ ಎ‌ನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ

0

ವ್ಯಕ್ತಿತ್ವ ನಿರ್ಮಾಣಕ್ಕೆ ಎನ್ ಎಸ್ ಎಸ್ ಪೂರಕ: ಕೆ.ಆರ್.ಗಂಗಾಧರ್

ಕರ್ನಾಟಕ ಸರಕಾರ , ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ (ಪದವಿಪೂರ್ವ)ಮತ್ತು ನೆಹರೂ ಸ್ಮಾರಕ ಪದವಿಪೂರ್ವ ಕಾಲೇಜು ಅರಂತೋಡು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ 16ನೇ ವರ್ಷದ ವಾರ್ಷಿಕ ವಿಶೇಷ ಶಿಬಿರವು ಅರಂಬೂರಿನ ಇಡ್ಯಡ್ಕ ಸ. ಉ.ಹಿ.ಪ್ರಾ.ಶಾಲೆಯಲ್ಲಿ ಉದ್ಘಾಟನೆಗೊಂಡಿತು.

ಕಾಲೇಜಿನ ಸಂಚಾಲಕರಾದ ಕೆ. ಆರ್. ಗಂಗಾಧರ್ ಅವರು ಅಧ್ಯಕ್ಷತೆ ವಹಿಸಿ, ಮಾತನಾಡಿ,
ಎನ್.ಎಸ್.ಎಸ್. ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣಕ್ಕೆ ಪೂರಕವಾಗಿದೆ. ಇಲ್ಲಿ ಸಿಗುವ ಅವಕಾಶಗಳನ್ನು ಬಳಸಿಕೊಂಡು ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯ ಎಂದು ಹೇಳಿದರು.

ರಾಜ್ಯ ಉತ್ತಮ ಶಿಕ್ಷಕ ಪುರಸ್ಕೃತ ಮುಖ್ಯೋಪಾಧ್ಯಾಯ ದಿವಾಕರ್ ನಾಯಕ್ ಸರಳಿಕುಂಜ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಸುಳ್ಯ ಕ್ಷೇತ್ರ ಶಿಕ್ಷಣ ಇಲಾಖೆಯ ಶಿಕ್ಷಣ ಸಂಯೋಜಕರಾದ ಸಂಧ್ಯಾ ಕುಮಾರಿ, ಶ್ರೀ ಮೂಕಾಂಬಿಕಾ ಭಜನಾ ಮಂದಿರದ ಗೌರವಾಧ್ಯಕ್ಷ ಶ್ರೀಪತಿ ಭಟ್ ಮಜಿಗುಂಡಿ,ಶಾಲಾ
ಎಸ್. ಡಿ.ಎಂ.ಸಿ. ಅಧ್ಯಕ್ಷ ರಮೇಶ್, ಶಾಲಾ ಮುಖ್ಯೋಪಾಧ್ಯಯನಿ ವಿಜಯಲಕ್ಷ್ಮಿ ಉಪಸ್ಥಿತರಿದ್ದರು.

ಕಾಲೇಜಿನ ಹಿರಿಯ ಉಪನ್ಯಾಸಕ ಸುರೇಶ್ ವಾಗ್ಲೆ ಪ್ರಸ್ತಾವನೆ ಯೊಂದಿಗೆ ಸ್ವಾಗತಿಸಿದರು. ಕಾರ್ಯಕ್ರಮಾಧಿಕಾರಿ ಲಿಂಗಪ್ಪ ಎಂ. ವಂದಿಸಿದರು. ಉಪನ್ಯಾಸಕರಾದ ಮೋಹನ್ ಚಂದ್ರ ನಿರೂಪಿಸಿದರು. ಶಿಬಿರಾರ್ಥಿಗಳು ಪ್ರಾರ್ಥಿಸಿದರು. ಶಿಬಿರದಲ್ಲಿ 67 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.