ರಾಜ್ಯ ಮೊಗೇರ ಸಂಘದ ಅಧ್ಯಕ್ಷರಾಗಿ ನಂದರಾಜ ಸಂಕೇಶ ಆಯ್ಕೆ

0


ಕರ್ನಾಟಕ ರಾಜ್ಯ ಮೊಗೇರ ಸಂಘದ ನೂತನ ಅಧ್ಯಕ್ಷರಾಗಿ ಸುಳ್ಯದ ನಂದರಾಜ್ ಸಂಕೇಶರವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಅ.೬ರಂದು ಪುತ್ತೂರಿನ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ವಿಶ್ವನಾಥ ಬೆಂಗಳೂರುರವರ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಪ್ರಧಾನ ಕಾರ್ಯದರ್ಶಿಯಾಗಿ ಚಿತ್ತರಂಜನ್ ಮಂಗಳೂರು, ಕೋಶಾಧಿಕಾರಿಯಾಗಿ ಕಾರ್ಕಳದ ಮೋಹನ್ ನಕ್ರೆ ಆಯ್ಕೆಯಾಗಿದ್ದಾರೆ.
ನಂದರಾಜ್‌ರವರು ಅಂಚೆ ಪಾಲಕರಾಗಿ ಜಿಲ್ಲೆಯ ಹಲವೆಡೆ ಕಾರ್ಯನಿರ್ವಹಿಸಿದ್ದರಲ್ಲದೆ ಸ್ವಯಂ ನಿವೃತ್ತಿ ಪಡೆದು ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದರು. ಈಗ ಅವರು ಕಾಂಗ್ರೆಸ್ ಪಕ್ಷದ ವಕ್ತಾರರಾಗಿದ್ದಾರೆ. ಜನಪದ ತಜ್ಞರಾಗಿಯೂ, ರಂಗನಟನಾಗಿಯೂ ಗುರುತಿಸಿಕೊಂಡಿದ್ದಾರೆ.