ಸುಳ್ಯ ಸುದ್ದಿ ಕಚೇರಿಯಲ್ಲಿ ಆಯುಧ ಪೂಜೆ

0

ಸುಳ್ಯ ಸುದ್ದಿ ಬಿಡುಗಡೆ ಕಚೇರಿಯಲ್ಲಿ ಆಯುಧ ಪೂಜೆ ಅ.10ರಂದು ಸಂಜೆ ನಡೆಯಿತು.

ಪುರೋಹಿತ ನಟರಾಜ ಶರ್ಮರ ಪೌರೋಹಿತ್ಯದಲ್ಲಿ ಪೂಜಾ ಕಾರ್ಯ ನೆರವೇರಿತು.‌

ಈ ಸಂದರ್ಭದಲ್ಲಿ ಸುದ್ದಿ ಬಿಡುಗಡೆ ಪತ್ರಿಕೆ ಸಂಪಾದಕರಾದ ಹರೀಶ್ ಬಂಟ್ವಾಳ್, ಚಾನೆಲ್ ಮುಖ್ಯಸ್ಥರಾದ ದುರ್ಗಾಕುಮಾರ್ ನಾಯರ್ ಕೆರೆ, ಮಾಹಿತಿ ವಿಭಾಗ ಮುಖ್ಯಸ್ಥರಾದ ಕೃಷ್ಣಬೆಟ್ಟ, ಜಾಹೀರಾತು ವಿಭಾಗ ಮುಖ್ಯಸ್ಥರಾದ ರಮೇಶ್ ನೀರಬಿದಿರೆ, ಕಂಪ್ಯೂಟರ್ ವಿಭಾಗ ಮುಖ್ಯಸ್ಥರಾದ ಶ್ರೀಧರ ಕಜೆಗದ್ದೆ,
ಕಚೇರಿ ವ್ಯವಸ್ಥಾಪಕರಾದ ಯಶ್ವಿತ್ ಕಾಳಮ್ಮನೆ ಹಾಗೂ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಸುದ್ದಿಯ ವರದಿಗಾರರಾದ, ಭಜಕರಾದ ಶಿವಪ್ರಸಾದ್ ಆಲೆಟ್ಟಿ ಮತ್ತು ದಯಾನಂದ ಕೋರತೊಡಿಯವರ ನೇತ್ರತ್ವದಲ್ಲಿ ಸುದ್ದಿ ಸಿಬ್ಬಂದಿಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.