ಸುಳ್ಯ ಯೋಜನಾಧಿಕಾರಿ ಕಚೇರಿಯಲ್ಲಿ ಗಣಪತಿ ಹವನ ಹಾಗೂ ಆಯುಧ ಪೂಜೆ

0

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ತಾಲೂಕು ಯೋಜನಾಧಿಕಾರಿ ಕಚೇರಿಯಲ್ಲಿ ನವರಾತ್ರಿ ಉತ್ಸವದ ಪ್ರಯುಕ್ತ ಆಯುಧ ಪೂಜೆಯು ಅ.10 ರಂದು ನಡೆಯಿತು.

ಬೆಳಗ್ಗೆ ಪುರೋಹಿತ ಅಭಿರಾಮ್ ಭಟ್ ಅರಂಬೂರು ರವರ ನೇತೃತ್ವದಲ್ಲಿ ಗಣಪತಿ ಹವನವಾಗಿ ದುರ್ಗಾದೇವಿಯ ಪೂಜೆ ಹಾಗೂ ಆಯುಧ ಪೂಜೆಯು ನೆರವೇರಿತು.

ಈ ಸಂದರ್ಭದಲ್ಲಿ ಯೋಜನಾಧಿಕಾರಿ ಮಾಧವ ಗೌಡ, ಸುಳ್ಯ ಜನಜಾಗೃತಿ ವೇದಿಕೆ ಅಧ್ಯಕ್ಷ ಲೋಕನಾಥ್ ಅಮೆಚೂರು, ಸುಳ್ಯ ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಯತೀಶ್ ರೈ ದುಗಲಡ್ಕ, ಅಲೆಟ್ಟಿ ಗ್ರಾಮ ಪಂಚಾಯತ್ ಸದಸ್ಯ ರತೀಶನ್ ಅರಂಬೂರು, ಭಜನಾ ಪರಿಷತ್ ಗೌರವಾಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ, ಜನಜಾಗೃತಿ ವೇದಿಕೆ ಸದಸ್ಯ ಬೂಡು ರಾಧಾಕೃಷ್ಣ ‌ರೈ, ಪತ್ರಕರ್ತ ತೇಜೇಶ್ವರ್ ಕುಂದಲ್ಪಾಡಿ ಮತ್ತಿತರರು ಉಪಸ್ಥಿತರಿದ್ದರು. ಯೋಜನಾಧಿಕಾರಿ ಕಛೇರಿ ಪ್ರಬಂಧಕರು, ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಹಾಗೂ ಕಛೇರಿಯ ಸಿಬ್ಬಂದಿ ವರ್ಗದವರು ಮತ್ತು ಸಂಘದ ಸದಸ್ಯರು ಭಾಗವಹಿಸಿದರು.