ವಿಧಾನ ಪರಿಷತ್ ಚುನಾವಣೆ: ಸಂಸದ ಚೌಟರಿಂದ ಪ್ರಚಾರ ಸಭೆ

0

ವಿಧಾನ ಪರಿಷತ್ ಚುನಾವಣಾ ಹಿನ್ನೆಲೆಯಲ್ಲಿ ಸಂಸದ ಬ್ರಿಜೇಶ್ ಚೌಟ ರವರು ಸುಳ್ಯ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಪಂಜದಲ್ಲಿ ಕಾರ್ಯಕರ್ತರ ಸಭೆ ನಡೆಸಿದರು.

ನಂತರ ಕುಕ್ಕೆಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು,ಪುತ್ತೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಪ್ರತಾಪ್ ಸಿಂಹ ನಾಯಕ್, ಗಣೇಶ್ ಕಾರ್ಣಿಕ್, ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಲಳಂಬೆ ಮತ್ತಿತರರು ಉಪಸ್ಥಿತರಿದ್ದರು.