ವಿಶೇಷ ಕಾಯಿಲೆಯಿಂದ ಬಳಲುತ್ತಿರುವ ಚಾಂದಿನಿಯವರನ್ನು ಕೆವಿಜಿ ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

0

ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಇಂದು ಸುಳ್ಯಕ್ಕೆ ಆಗಮಿಸಿದ ಆರೋಗ್ಯ ಸಚಿವ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರು ಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀಮತಿ ಚಾಂದಿನಿಯವರನ್ನು ಭೇಟಿ ಮಾಡಿ ಯೋಗ ಕ್ಷೇಮ ವಿಚಾರಿಸಿದರು.

ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮ ಮತ್ತು ಕಾರ್ಯದರ್ಶಿ ಪಿ.ಎಸ್ ಗಂಗಾಧರ್ ಅವರ ವಿಶೇಷ ಆಸಕ್ತಿಯಿಂದ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರಿಗೆ ಶ್ರೀಮತಿ ಚಾಂದಿನಿಯವರು ಇದುವರೆಗೆ ನಡೆದ ಚಿಕಿತ್ಸೆಯ ಬಗ್ಗೆ ಮಾಹಿತಿ ನೀಡಿ, ವಿವರಿಸಿದರು.

ಅಲ್ಲದೆ ಹೆಚ್ಚಿನ ಚಿಕಿತ್ಸೆಗೆ ಸರಕಾರದಿಂದ ಧನಸಹಾಯ ಮಾಡುವ ಬಗ್ಗೆ ಸಚಿವರಿಗೆ ಮನವಿ ಪತ್ರ ನೀಡಿದರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು, ಹೆಚ್ಚಿನ ಚಿಕಿತ್ಸೆಗೆ ಹೈದರಾಬಾದ್ ಗೆ ತೆರಳಲು ಸೂಚಿಸಿದ್ದು, ಈ ಬಗ್ಗೆ ಅಲ್ಲಿಯ ಆರೋಗ್ಯ ಸಚಿವರೊಂದಿಗೆ ಮಾತನಾಡುವುದಾಗಿ ತಿಳಿಸಿದರು.

ಎಓಎಲ್ಇ ಅಧ್ಯಕ್ಷ ಡಾ.ಕೆ.ವಿ ಚಿದಾನಂದ, ಕಾರ್ಯದರ್ಶಿ ಅಕ್ಷಯ್ ಕೆ.ಸಿ, ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ. ಡಿ.ವಿ. ಲೀಲಾಧರ್, ಮಾಜಿ ಸಚಿವ ರಮಾನಾಥ ರೈ, ವಿಧಾನ ಪರಿಷತ್ ಸದಸ್ಯರುಗಳಾದ ಮಂಜುನಾಥ ಭಂಡಾರಿ, ಐವನ್ ಡಿಸೋಜ, ವಿಧಾನ ಪರಿಷತ್ ಅಭ್ಯರ್ಥಿ ರಾಜು ಪೂಜಾರಿ, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ, ಪ್ರಧಾನ ಕಾರ್ಯದರ್ಶಿ ಪಿ.ಎಸ್.ಗಂಗಾಧರ, ಮುಖಂಡರುಗಳಾದ ಜಿ.ಕೃಷ್ಣಪ್ಪ, ಡಾ.ಬಿ.ರಘು, ನಿತ್ಯಾನಂದ ಮುಂಡೋಡಿ, ಎಂ.ವೆಂಕಪ್ಪ ಗೌಡ, ಟಿ.ಎಂ.ಶಹೀದ್ ಮೊದಲಾದವರು ಉಪಸ್ಥಿತರಿದ್ದರು.