ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕೆ.ವಿ.ಜಿ.ಐ.ಪಿ.ಎಸ್ ನ ಆಶ್ರಿತ್ ಎ.ಸಿ ಯವರಿಗೆ ತೃತೀಯ ಸ್ಥಾನ

0

ಶ್ರೀವೀರ ಮಾರುತಿ ಸೇವಾ ಟ್ರಸ್ಟ್ ರಿ, ಮೂಡಬಿದ್ರೆ ಇವರ ಆಶ್ರಯದಲ್ಲಿ 35 ನೇ ವರ್ಷದ ಶ್ರೀ ಶಾರದೋತ್ಸವದ ಪ್ರಯುಕ್ತ ಯೋಗಶ್ರೀ ಯೋಗ ಬಳಗ ಮಂಗಳೂರು ಸಹಯೋಗದಲ್ಲಿ ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ ಅ. 9 ರಂದು ಮೂಡಬಿದ್ರೆಯ ಶ್ರೀ ವೆಂಕಟರಮಣ ದೇವಸ್ಥಾನದ ವಠಾರದಲ್ಲಿ ನಡೆದಿದ್ದು, ಒಂದರಿಂದ ನಾಲ್ಕನೇ ತರಗತಿಯ ವಿಭಾಗದ ಈ ಸ್ಪರ್ಧೆಯಲ್ಲಿ ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯ ಶಾಲೆಯ ಆಶ್ರಿತ್ ಎ.ಸಿ ಭಾಗವಹಿಸಿ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. ಇವರು ಚೇತನ್ ಅಮೆಮನೆ ಹಾಗೂ ದಿವ್ಯ ಚೇತನ್ ಅಮೆಮನೆ ಇವರ ಪುತ್ರ. ಬಾಲಕನ ಈ ಸಾಧನೆಯನ್ನು ಗಮನಿಸಿ ಶಾಲಾ ಸಂಚಾಲಕ ಡಾ. ರೇಣುಕಾ ಪ್ರಸಾದ್ ಕೆ ವಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು ಜೆ, ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್, ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ, ಎಲ್ಲಾ ಶಿಕ್ಷಕ ಮತ್ತು ಶಿಕ್ಷಕೇತರವೃಂದದವರು ಅಭಿನಂದಿಸಿದರು.


ಇವರಿಗೆ ಯೋಗೇನ ಚಿತ್ತಸ್ಯ ಯೋಗ ಕೇಂದ್ರ ಸುಳ್ಯದ ಯೋಗ ಶಿಕ್ಷಕ ಸಂತೋಷ್ ಮುಂಡಕಜೆ ಹಾಗೂ ಪ್ರಶ್ವಿಜ ಸಂತೋಷ್ ಮಾರ್ಗದರ್ಶನ ನೀಡಿರುತ್ತಾರೆ.