ದುಗ್ಗಲಡ್ಕ ಶ್ರೀ ದುಗ್ಗಲಾಯ ದೈವಸ್ಥಾನದಲ್ಲಿ ದುರ್ಗಾಪೂಜೆ ಮತ್ತು ಆಯುಧಪೂಜೆ

0

ದುಗ್ಗಲಡ್ಕದ ಶ್ರೀ ದುಗ್ಗಲಾಯ ದೈವಸ್ಥಾನದಲ್ಲಿ ದುರ್ಗಾಪೂಜೆ, ಆಯುಧಪೂಜೆ ಮತ್ತು ತೆನೆಹಬ್ಬ ಇಂದು ನಡೆಯಿತು.


ಬೆಳಿಗ್ಗೆ 9 ರಿಂದ ದುರ್ಗಾಪೂಜೆ ಆರಂಭಗೊಂಡು ಆಯುಧಪೂಜೆ ನಡೆಯಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ,ಪ್ರಸಾದ ಭೋಜನ ನಡೆಯಿತು. ಜೋಗಿಯಡ್ಕ ರಾಧಾಕೃಷ್ಣ ಭಟ್ ವೈದಿಕ ಕಾರ್ಯ ನಡೆಸಿದರು.


ಈ ಸಂದರ್ಭದಲ್ಲಿ ದೈವಸ್ಥಾನದ ಅನುವಂಶಿಕ ಮೊಕ್ತೇಸರರಾದ ರಾಘವೇಂದ್ರ ಭಟ್ ಕಲ್ದಂಬೆ, ಸಮಿತಿಯ ಅಧ್ಯಕ್ಷರಾದ ಕುಶಾಲಪ್ಪ ಗೌಡ ಕಜೆ, ಗೌರವಾಧ್ಯಕ್ಷರಾದ ಸುಂದರ ರಾವ್, ಮಾಜಿ ಅಧ್ಯಕ್ಷರಾದ ದಯಾನಂದ ಸಾಲಿಯಾನ್ ಮೂಡೆಕಲ್ಲು,ಕಾರ್ಯದರ್ಶಿ ಶೇಖರ್ ಕುದ್ಪಾಜೆ, ಮಹಿಳಾ ಸೇವಾ ಸಮಿತಿಯ ಅಧ್ಯಕ್ಷೆ ಶ್ರೀಮತಿ ಪ್ರಭಾವತಿ ರೈ, ಯುವ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ನಾಯ್ಕ್, ನ.ಪಂ.ಸದಸ್ಯರಾದ ಬಾಲಕೃಷ್ಣ ರೈ ದುಗ್ಗಲಡ್ಕ ಹಾಗೂ ಸಮಿತಿಗಳ ಸದಸ್ಯರು, ಊರ ಭಕ್ತಾಧಿಗಳು ಉಪಸ್ಥಿತರಿದ್ದರು.