ಕೆವಿಜಿ ಪಾಲಿಟೆಕ್ನಿಕ್ : ಅಡ್ತಲೆಯಲ್ಲಿ ಎನ್ಎಸ್ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

0

ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ತಯಲ್ಲಿ ಉದ್ಘಾಟನೆಗೊಂಡಿತು.


ಕಾಲೇಜಿನ ಉಪ ಪ್ರಾಂಶುಪಾಲ ಅಣ್ಣಯ್ಯ ಕೆ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಪ್ರಗತಿಪರ ಕೃಷಿಕ ಕೇಶವ ಎ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅಡ್ತಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಭವಾನಿ ಶಂಕರ ಅಡ್ತಲೆ, ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಲೋಹಿತ್ ಮೇಲಡ್ತಲೆ, ಶಾಲಾ ಮುಖ್ಯೋಪಾಧ್ಯಾಯ ಮುಕುಂದ ದೇರಾಜೆ ಉಪಸ್ಥಿತರಿದ್ದರು. ಸಮಾರಂಭದ ವೆಡದಿಕೆಯಲ್ಲಿ ಎನ್ ಎಸ್ ಎಸ್ ಘಟಕ ನಾಯಕರಾದ ಪ್ರಣಂ ವೈ, ಲಿಖಿತ್ ಕೆ ವಿ ,ಅಪೂರ್ವ ಕೆ ಬಿ. ಮತ್ತು ದೀಕ್ಷಿತಾ ಕೆ ಸಿ. ಉಪಸ್ಥಿತರಿದ್ದರು ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಚಂದ್ರಶೇಖರ ಬಿಳಿನೆಲೆ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಇನ್ನೋರ್ವ ಕಾರ್ಯಕ್ರಮಾಧಿಕಾರಿ ಸುನಿಲ್ ಕುಮಾರ್ ಎನ್ ಪಿ ವಂದಿಸಿದರು.


ಒಂದು ವಾರ ನಡೆಯಲಿರುವ ಶಿಬಿರದಲ್ಲಿ ಶಾಲಾ ಆಟದ ಮೈದಾನ ವಿಸ್ತರಣೆ, ಶಾಲಾ ಕೈತೋಟ ರಚನೆ ಸೇರಿದಂತೆ ವಿವಿಧ ಕಾರ್ಯಕ್ರಮ ಗಳು ನಡೆಯಲಿವೆ.