ಶ್ರೀ ಶಾರದಾಂಬ ದಸರಾ ಉತ್ಸವ – ಮಕ್ಕಳ ದಸರಾ -2024 ಸಮಾರೋಪ

0

ಮಕ್ಕಳಿಗೆ ವಿವಿಧ ಸ್ಪರ್ಧೆಗಳ ಆಯೋಜನೆ – ಬಹುಮಾನ ವಿತರಣೆ


ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ, ದಸರಾ ಉತ್ಸವ ಸಮಿತಿ ಸುಳ್ಯ ತಾಲೂಕು, ಶ್ರೀ ಶಾರದಾಂಬ ಉತ್ಸವ ಸಮಿತಿ ಸುಳ್ಯ ಇದರ ವತಿಯಿಂದ 53ನೇ ವರ್ಷದ ಶ್ರೀ ಶಾರದಾಂಬ ಉತ್ಸವ ಸುಳ್ಯ ದಸರಾ ಕಾರ್ಯಕ್ರಮದಲ್ಲಿ ಮಕ್ಕಳ ದಸರಾ -2024 ಕಾರ್ಯಕ್ರಮದ ಸಮಾರೋಪ ಸಮಾರಂಭವು ಅ.13ರಂದು ಸಂಜೆ ನಡೆಯಿತು.

ಬೆಳಿಗ್ಗೆಯಿಂದ ಮಕ್ಕಳಿಗೆ ಭಾವಗೀತೆ, ಭಕ್ತಿಗೀತೆ, ಛದ್ಮವೇಷ ಸ್ಪರ್ಧೆ, ಸಮೂಹ ನೃತ್ಯ, ಜನಪದಗೀತೆ, ಭರತನಾಟ್ಯ, ಡ್ರಾಯಿಂಗ್ ಗೂಡುದೀಪ ಸ್ಪರ್ಧೆ, ಲಕ್ಕಿಗೇಮ್ ಸೇರಿದಂತೆ ವಿವಿಧ ಸ್ಪರ್ಧಾ ಕಾರ್ಯಕ್ರಮಗಳನ್ನು ನಡೆಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಶ್ರೀ ಶಾರದಾಂಬ ಉತ್ಸವ ಸಮಿತಿ ಅಧ್ಯಕ್ಷ ಡಾ. ಲೀಲಾಧರ್ ಡಿ. ವಿ. ಅವರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಉತ್ಸವ ಸಮಿತಿ ಗೌರವಾಧ್ಯಕ್ಷ ಕೃಷ್ಣ ಕಾಮತ್ ಅರಂಬೂರು, ಶ್ರೀ ಶಾರದಾಂಬ ಸೇವಾ ಸಮಿತಿ ಗೌರವಾಧ್ಯಕ್ಷ ಗೋಕುಲ್ ದಾಸ್, ಅಧ್ಯಕ್ಷ ನಾರಾಯಣ ಕೇಕಡ್ಕ, ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್ ಗೌರವ ಸದಸ್ಯ ತೀರ್ಥರಾಮ ಜಾಲ್ಸೂರು, ಸತೀಶ್ ಕೆ.ಜಿ., ಅಭಿಷೇಕ್ ಕೇಕಡ್ಕ, ರಂಗಮಯೂರಿ ಕಲಾಶಾಲೆಯ ಲೋಕೇಶ್ ಊರುಬೈಲು, ಎಸ್.ಬಿ. ಲ್ಯಾಬ್ ನ ಬಾಲಕೃಷ್ಣ, ಚಂದ್ರಶೇಖರ ಪಂಡಿತ್ ಉಪಸ್ಥಿತರಿದ್ದರು.

ಮಕ್ಕಳ ದಸರಾ ಸ್ಪರ್ಧಾ ಕಾರ್ಯಕ್ರಮದಲ್ಲಿ ತಾಲೂಕಿನ ನೂರಾರು ಮಂದಿ ಮಕ್ಕಳು ಭಾಗವಹಿಸಿದ್ದರು.