ಯೋಗೇನ ಚಿತ್ತಸ್ಯ ಯೋಗ ಕೇಂದ್ರದ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

0

ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆ ಸಿರಿಗೆರೆ, ಚಿತ್ರದುರ್ಗ ಜಿಲ್ಲೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಚಿತ್ರದುರ್ಗ ಇವರ ಸಂಯುಕ್ತ ಆಶ್ರಯದಲ್ಲಿ ಅ.9 ಮತ್ತು ‌10 ರಂದು ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯು ಚಿತ್ರದುರ್ಗದಲ್ಲಿ ನಡೆಯಿತು.

ಯೋಗೇನ ಚಿತ್ತಸ್ಯ ಯೋಗ ಕೇಂದ್ರದ ವಿದ್ಯಾರ್ಥಿಗಳಾದ ಶ್ರೀಮಾ ಕೆ.ಹೆಚ್, ಪ್ರೌಢಶಾಲಾ ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದರು.ಈಕೆ ಹುದೇರಿ ಕುಶಾಲಪ್ಪ ಗೌಡ ಹಾಗೂ ಸುಜಿತ ದಂಪತಿಗಳ ಪುತ್ರಿ. ಪ್ರಾಥಮಿಕ ಬಾಲಕಿಯರ ವಿಭಾಗದಲ್ಲಿ ಹಾರ್ದಿಕ ಕೆ.ಕೆ ಚತುರ್ಥ ಸ್ಥಾನಿಯಾಗಿದ್ದು ಈಕೆ ಕೃಷ್ಣಪ್ಪ ಹಾಗೂ ಪುಷ್ಪಾವತಿ ದಂಪತಿಗಳ ಪುತ್ರಿ. ಸೋನ ಅಡ್ಕಾರ್ 5 ನೇಯ ಸ್ಥಾನ ಪಡೆದರು. ಈಕೆ ಶರತ್ ಅಡ್ಕಾರ್ ಹಾಗೂ ಶೋಭಾ ದಂಪತಿಗಳ ಪುತ್ರಿ. ಇವರುಗಳು ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ಯೋಗ ಶಿಕ್ಷಕ ಸಂತೋಷ್ ಮುಂಡಕಜೆ ಹಾಗೂ ಪ್ರಶ್ವಿಜಸಂತೋಷ್ ತರಬೇತಿ ನೀಡಿರುತ್ತಾರೆ.