ಸುಳ್ಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

0

ನಾಡ ಹಬ್ಬಗಳ ದಿನಾಚರಣೆ ಸಮಿತಿ ಇದರ ಆಶ್ರಯದಲ್ಲಿ ಶ್ರೀ‌ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ ಸುಳ್ಯ‌ ತಾಲೂಕು ಕಚೇರಿಯಲ್ಲಿ ನಡೆಯಿತು.

ಸುಳ್ಯ ಗ್ರೇಡ್ 2 ತಹಶೀಲ್ದಾರ್ ಮಂಜುನಾಥ್ ಅಧ್ಯಕ್ಷತೆ ‌ವಹಿಸಿ, ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿದರು.

ಸುಳ್ಯ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಚಂದ್ರಶೇಖರ ಸಂಪನ್ಮೂಲ ವ್ಯಕ್ತಿಯಾಗಿ ದ್ದರು.

ಸಮಾಜಕಲ್ಯಾಣ ‌ಸಹಾಯ‌ಕ ನಿರ್ದೇಶಕಿ ಶ್ರೀಮತಿ ಉಮಾದೇವಿ, ಎಡಿಎಲ್ ಆರ್ ಜಿನೇಶ್ ಕುಮಾರ್, ಸರಕಾರಿ ‌ನೌಕರರ ಸಂಘದ ಅಧ್ಯಕ್ಷೆ ಶ್ರೀಮತಿ ಧನಲಕ್ಷ್ಮೀ ‌ಕುದ್ಪಾಜೆ, ಮಾಜಿ ಅಧ್ಯಕ್ಷ ಸಿಂಗಾರ ಶೆಟ್ಟಿ, ಸುಳ್ಯ ರೇಂಜರ್ ಮಂಜುನಾಥ್, ಗ್ರಾಮೀಣ ಮತ್ತು ಕುಡಿಯುವ ನೀರು ನೈರ್ಮಲ್ಯ ಇಲಾಖೆಯ ಎ.ಇ.ಇ. ಶ್ರೀಮತಿ ಚೈತ್ರ, ಉಪತಹಶೀಲ್ದಾರ್ ಚಂದ್ರಕಾಂತ್ ಎಂ.ಆರ್., ಆಹಾರ‌ ನಿರೀಕ್ಷಕಿ ಅನಿತಾ ದಯಾನಂದ ಡಿ.ಟಿ. ಮೊದಲಾದವರಿದ್ದರು.

ಮಹಾದೇವಸ್ವಾಮಿ ಕಾರ್ಯಕ್ರಮ ನಿರೂಪಿಸಿದರು.