ಬೆಳ್ಳಾರೆ ಜ್ಞಾನದೀಪದಲ್ಲಿ ಶಾರದಾ ಪೂಜೆ ಮತ್ತು ವಾಲ್ಮೀಕಿ ಜಯಂತಿ ಆಚರಣೆ

0

ಬೆಳ್ಳಾರೆಯ ದೇವಿ ಹೈಟ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಜ್ಞಾನದೀಪ ಶಿಕ್ಷಣ ತರಬೇತಿ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ 17ನೇ ವರ್ಷದ ಶ್ರೀ ಶಾರದಾ ಪೂಜೆ ಮತ್ತು ವಾಲ್ಮೀಕಿ ಜಯಂತಿ ಆಚರಣೆ ನಡೆಯಿತು.

ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅರ್ಚಕ ಉದಯ ಕುಮಾರ್ ಪೂಜಾ ಕಾರ್ಯ ನಡೆಸಿದರು. ಸಂಸ್ಥೆಯ ಮೊಂಟೆಸ್ಸರಿ ವಿದ್ಯಾರ್ಥಿ ಶಿಕ್ಷಕಿಯರಿಂದ ಭಜನಾ ಕಾರ್ಯಕ್ರಮ ನಡೆಯಿತು. ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ, ಪುಷ್ಪ ನಮನ ಸಲ್ಲಿಸಲಾಯಿತು. ಸಂಸ್ಥೆಯ ನಿರ್ದೇಶಕರು, ಉಪನ್ಯಾಸಕರು ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.