ಅಡ್ಪಂಗಾಯ ಶ್ರೀ ಅಯ್ಯಪ್ಪ ಮಂದಿರದಲ್ಲಿ ಸಂಕ್ರಮಣ ಪೂಜೆ, ಸನ್ಮಾನ

0

ಅಡ್ಪಂಗಾಯ ಶ್ರೀ ಅಯ್ಯಪ್ಪ ಮಂದಿರದಲ್ಲಿ ಸಂಕ್ರಮಣದ ಪ್ರಯುಕ್ತ ಪೂಜಾಕಾರ್ಯ ಹಾಗೂ ಸನ್ಮಾನ ಕಾರ್ಯಕ್ರಮ ಅ. 16ರಂದು ಕ್ಷೇತ್ರದ ಧರ್ಮದರ್ಶಿ ಹಾಗೂ ಗುರುಸ್ವಾಮಿಗಳಾದ ಶಿವಪ್ರಕಾಶ ಅಡ್ಪಂಗಾಯರ ನೇತೃತ್ವದಲ್ಲಿ ನಡೆಯಿತು.

ಬೆಳಿಗ್ಗೆ ಗಣಪತಿ ಹವನ ಹಾಗೂ ವೈದಿಕ ಕಾರ್ಯಗಳು ನಡೆಯಿತು. ಸಂಜೆ ದುರ್ಗಾಪೂಜೆ, ವಿಶ್ವಹಿಂದೂ ಪರಿಷತ್ ಭಜರಂಗದಳ ಶಿವಾಜಿ ಶಾಖೆ ಅಜ್ಜಾವರ ಇದರ ಮಕ್ಕಳ ತಂಡದಿಂದ ಭಜನಾ ಕಾರ್ಯಕ್ರಮ ಬಳಿಕ ಶಿವಪ್ರಕಾಶ ಗುರುಸ್ವಾಮಿಯವರಿಂದ ಅಯ್ಯಪ್ಪ ಸ್ವಾಮಿಯ ದರ್ಶನ ಸೇವೆಯೊಂದಿಗೆ ಮಹಾಮಂಗಳಾರತಿ ನಡೆಯಿತು.

ಈ ಸಂದರ್ಭದಲ್ಲಿ ಸುಳ್ಯ ಸುದ್ದಿ ಪತ್ರಿಕೆಯ ವರದಿಗಾರ ದಯಾನಂದ ಕೊರತ್ತೋಡಿಯವರನ್ನು ಸನ್ಮಾನಿಸಲಾಯಿತು. ಬಳಿಕ ಪ್ರಸಾದ ವಿತರಣೆ, ಅನ್ನದಾನ ನಡೆಯಿತು. ಅ. 17ರಂದು 29 ಮಂದಿ ಶಿಷ್ಯವೃಂದದ ಜೊತೆ 279ನೇ ಶಬರಿಮಲೆ ಯಾತ್ರೆ ಕೈಗೊಂಡರು.