ವಿಶೇಷ ಕಾಯಿಲೆಯಿಂದ ಬಳಲುತ್ತಿರುವ ಚಾಂದಿನಿಯನ್ನು ಭೇಟಿ ಮಾಡಿದ ಸಂಸದ ಬ್ರಿಜೇಶ್ ಚೌಟ

0

ವಿಶೇಷ ಕಾಯಿಲೆ ಹಾಗೂ ಹೃದಯದ ಟ್ಯೂಮರ್ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಸುಳ್ಯದ ಶ್ರೀಮತಿ ಚಾಂದಿನಿ ಅವರನ್ನು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಇಂದು ( ಅ. 17 ರಂದು ) ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.

ಈ ಸಂದರ್ಭದಲ್ಲಿ ಶಾಸಕಿ ಕು. ಭಾಗೀರಥಿ ಮುರುಳ್ಯ, ಬಿಜೆಪಿ ಮುಖಂಡರಾದ ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ಎ.ಓ.ಎಲ್.ಇ ಕಾರ್ಯದರ್ಶಿ ಅಕ್ಷಯ್ ಕೆ.ಸಿ, ಶ್ರೀಮತಿ ಚಾಂದಿನಿಯವರ ಪತಿ ಪುರುಷೋತ್ತಮ ಸಿ ಮೊದಲಾದವರು ಉಪಸ್ಥಿತರಿದ್ದರು.