ಬೇಂಗಮಲೆ : ತ್ಯಾಜ್ಯ ಎಸೆದವರಿಗೆ ಪಂಚಾಯತ್ ನಿಂದ ದಂಡ – ಸಾರ್ವಜನಿಕರಿಂದ ಶ್ಲಾಘನೆ

0

ಐವರ್ನಾಡು ಗ್ರಾಮದ ಬೇಂಗಮಲೆಯಲ್ಲಿ ಕಸ ಎಸೆದವರಿಗೆ ಪಂಚಾಯತ್ ನಿಂದ ದಂಡ ವಿಧಿಸಿದ ಘಟನೆ ನಡೆದಿದ್ದು
ಕಸ ಎಸೆದವರಿಂದಲೇ ತ್ಯಾಜ್ಯ ವಿಲೇವಾರಿಗೊಳಿಸಲಾಯಿತು.
ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೇಂಗಮಲೆ ಎಂಬಲ್ಲಿ ತ್ಯಾಜ್ಯ ಎಸೆದ ಸುಳ್ಯ ನಿವಾಸಿ ಲಿಂಗಣ್ಣ ಎಂಬವರಿಗೆ ಪಂಚಾಯತ್ ರೂ 6000.00 ದಂಡ ವಿಧಿಸಿದ ಘಟನೆ ನಡೆದಿದೆ.
ಅ.19 ರಂದು ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಂಗಮಲೆಯಲ್ಲಿ ತ್ಯಾಜ್ಯ ಎಸೆದಿದ್ದಾರೆ ಎಂಬ ಮಾಹಿತಿ ಪಡೆದ ಪಂಚಾಯತ್ ಅಭಿವೃದ್ದಿ ಅಧಿಕಾರಿ ಶ್ಯಾಮ್ ಪ್ರಸಾದ್ ಎಂ ಆರ್ ರವರು ತ್ಯಾಜ್ಯ ಎಸೆದ ಸ್ಥಳಕ್ಕೆ ಭೇಟಿ ನೀಡಿ ತ್ಯಾಜ್ಯ ತುಂಬಿದ್ದ ಬ್ಯಾಗ್ ಪರಿಶೀಲಿಸಿ ತ್ಯಾಜ್ಯ ಎಸೆದ ವ್ಯಕ್ತಿಯನ್ನು ಪತ್ತೆ ಹಚ್ಚಿ ಅ.19 ರಂದು ಕಛೇರಿಗೆ ಕರೆಸಿ ರೂ 6000.00 ದಂಡ ವಿಧಿಸಿ ತ್ಯಾಜ್ಯ ಎಸೆದವರಿಂದಲೇ ತ್ಯಾಜ್ಯವನ್ನು ವಿಲೇವಾರಿಗೊಳಿಸಲಾಯಿತು.