ಅ.27ರಂದು ಸುಳ್ಯದಲ್ಲಿ ಕರಾವಳಿ ಕೋಗಿಲೆ ಗಾಯನೋತ್ಸವ

0

ಗಾನಕೋಗಿಲೆ ಕುಟುಂಬ ಮೈಸೂರು ಹಾಗೂ ಸುಳ್ಯದ ಗಾಯಕರ ಬಳಗದ ವತಿಯಿಂದ ಕರಾವಳಿ ಕೋಗಿಲೆ ಗಾಯನೋತ್ಸವವು ಸುಳ್ಯದ ಶ್ರೀ ವೆಂಕಟರಮಣ ಕೋ ಆಪರೇಟೀವ್ ಸೊಸೈಟಿಯ ಸಭಾಂಗಣದಲ್ಲಿ ಅ.27ರಂದು ನಡೆಯಲಿದೆ.

45 ಗಾಯಕ – ಗಾಯಕಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಾಡಲಿದ್ದಾರೆ.

ಕಾರ್ಯಕ್ರಮವನ್ನು ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಸುಳ್ಯ ನಗರ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಕಲಾ, ಸುಳ್ಯ ಟಿ.ಎ.ಪಿ.ಸಿ.ಎಂ.ಎಸ್ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಖ್ಯಾತ ಗಾಯಕ ಶಶಿಧರ್ ಕೋಟೆ, ಸುಳ್ಯ ಕಾಂಗ್ರೆಸ್ ಮುಖಂಡ ಕೃಷ್ಣಪ್ಪ ಹಾಗೂ ಮುಂತಾದವರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅತ್ಯುತ್ತಮ ಗಾಯಕರುಗಳಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ನೀಡಲಾಗುವುದು. ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ತೋರಿದ ಸಾಧಕರನ್ನು ಸನ್ಮಾನಿಸಲಾಗುವುದು ಎಂದು ಕಾರ್ಯಕ್ರಮದ ಆಯೋಜಕರು ತಿಳಿಸಿದ್ದಾರೆ.