



ಪೆರುವಾಜೆ ಗ್ರಾಮದ ಕೊಲ್ಯ ಶ್ರೀ ಕೊರಗಜ್ಜ ದೈವಸ್ಥಾನದಲ್ಲಿ ಗಣಹೋಮ ಮತ್ತು ಸತ್ಯನಾರಾಯಣ ಪೂಜೆ ಹಾಗೂ ದೈವಗಳ ನೇಮೋತ್ಸವವು ಡಿ.25 ರಂದು ಭಕ್ತಿ ಸಂಭ್ರಮದಿಂದ ನಡೆಯಿತು.
ಬೆಳಿಗ್ಗೆ ಗಣಹೋಮ, ಸತ್ಯನಾರಾಯಣ ಪೂಜೆ ಮಧ್ಯಾಹ್ನ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು.





ರಾತ್ರಿ ದೈವದ ಭಂಡಾರ ತೆಗೆಯಲಾಯಿತು.
ಬಳಿಕ ಚೌಕಾರು ಮಂತ್ರವಾದಿ ಗುಳಿಗ ಹಾಗೂ ಪಾಷಾಣಮೂರ್ತಿ ನೇಮೋತ್ಸವ ನಡೆಯಿತು.

ರಾತ್ರಿ ಸಾವಿರಾರು ಜನ ಭಕ್ತಾದಿಗಳು ಅನ್ನಸಂತರ್ಪಣೆ ಸ್ವೀಕರಿಸಿದರು.
ನಂತರ ಶ್ರೀ ಕೊರಗ ತನಿಯ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು.
ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತದಾರರಾದ ಪೊಡಿಯ ಮತ್ತು ಜಯಂತ ಕೊಲ್ಯ ಹಾಗೂ ಕುಟುಂಬಸ್ಥರು , ಸಾವಿರಾರು ಜನರು ಭಕ್ತಾದಿಗಳು ಉಪಸ್ಥಿತರಿದ್ದರು.










