ಪೆರುವಾಜೆ ಗ್ರಾಮದ ಪೆರುವೋಡಿ ಶ್ರೀ ವಿಷ್ಣಮೂರ್ತಿ ದೇವರ ವರ್ಷಾವಧಿ ಜಾತ್ರೋತ್ಸವವು ಜ.30 ರಂದು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿತು.
















ಬೆಳಿಗ್ಗೆ ದೇವತಾ ಪ್ರಾರ್ಥನೆ,ಮಹಾಗಣಪತಿ ಹೋಮ ಮತ್ತು ಶುದ್ಧಿ ಕಲಶ ನಡೆಯಿತು.
ಪೂರ್ವಾಹ್ನ ವಿಷ್ಣುಪ್ರಿಯ ಮಹಿಳಾ ಭಜನಾ ಮಂಡಳಿ ಬೆಳಂದೂರು ವಲಯ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು.
ಮಧ್ಯಾಹ್ನ ಮಹಾಪೂಜೆ ಮತ್ತು ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು.

ಸಂಜೆ ರಂಗಪೂಜೆ,ಮಹೋತ್ಸವ,ದರ್ಶನ ಬಲಿ,ಬಟ್ಟಲು ಕಾಣಿಕೆ,ಮಂತ್ರಾಕ್ಷತೆ ನಡೆಯಿತು.
ಬಳಿಕ ಗುಳಿಗ,ಪಂಜುರ್ಲಿ,ಶಿರಾಡಿ ದೈವಗಳ ನೇಮೋತ್ಸವ ಭಕ್ತಿ,ಸಂಭ್ರಮದಿಂದ ನಡೆಯಿತು.
ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರಾದ ಎಂ.ಕೆ.ಬಾಲಚಂದ್ರ ರಾವ್, ಉತ್ಸವ ಸಮಿತಿ ಅಧ್ಯಕ್ಷ ದಯಾನಂದ ಗೌಡ ಜಾಲು,ಮತ್ತು ಸದಸ್ಯರು,ಮೊಕ್ತೇಸರರಾದ ದಯಾಕರ ಆಳ್ವ ಬೋಳಕುಮೇರು,ಡಾ.ನರಸಿಂಹಶರ್ಮ ಕಾನಾವು,ವಸಂತ ಬೈಪಾಡಿತ್ತಾಯ ಮುಕ್ಕೂರು,ಸುರೇಶ. ಉಪಾಧ್ಯಾಯ ಅರ್ಚಕರು, ಕುಶಾಲಪ್ಪ ಗೌಡ ಪೆರುವಾಜೆ,ಶ್ರೀಮತಿ ಸುಜಾತ ವಿ.ರಾಜ್ ಕಜೆ , ಶ್ರೀಮತಿ ಪುಷ್ಪಾವತಿ ಎಂ.ಕಂಡಿಪ್ಪಾಡಿ, ಕೃಷ್ಣಪ್ಪ ನಾಯ್ಕ ದೇವಿಮೂಲೆ ಹಾಗೂ ಊರಿನ ಹತ್ತು ಸಮಸ್ತರು ಹಾಗೂ ಸಾವಿರಾರು ಜನ ಭಕ್ತಾದಿಗಳು ಉಪಸ್ಥಿತರಿದ್ದರು.










