














ಫೆ.5 ಬುಧವಾರದಂದು ಪೂರ್ವಾಹ್ನ 11.00 ರಿಂದ ಪೂರ್ವಾಹ್ನ 12.00 ರವರೆಗೆ ಮೆಸ್ಕಾಂ ಮಂಗಳೂರು ಕಾರ್ಯ ಮತ್ತು ಪಾಲನಾ ವೃತ್ತದ ಅಧೀಕ್ಷಕ ಇಂಜಿನಿಯರ್(ವಿ), ಇವರ ಅಧ್ಯಕ್ಷತೆಯಲ್ಲಿ ಸುಳ್ಯ ಮತ್ತು ಸುಬ್ರಹ್ಮಣ್ಯ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆಯನ್ನು ಮೆಸ್ಕಾಂ ಸುಬ್ರಹ್ಮಣ್ಯ ಉಪವಿಭಾಗ ಕಛೇರಿಯಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಗ್ರಾಹಕರು ತಮ್ಮ ಕುಂದುಕೊರತೆಗಳನ್ನು ಖುದ್ದಾಗಿ ಅಥವಾ ದೂರವಾಣಿ ಕರೆ (ದೂರವಾಣಿ ಸಂಖ್ಯೆ:08257-200699) ಮೂಲಕ ಸಲ್ಲಿಸಬಹುದು ಎಂದು ಮೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.









