ಸುಳ್ಯದ ಅಮರ ಸಂಘಟನಾ ಸಮಿತಿ ವತಿಯಿಂದ ಕುಕ್ಕುಜಡ್ಕದಲ್ಲಿ ಬ್ರಹತ್ ರಕ್ತದಾನ ಶಿಬಿರ

0

ಅಮರ ಸಂಘಟನಾ ಸಮಿತಿ ಸುಳ್ಯ ಇದರ ವತಿಯಿಂದ ದಿ. ಮುರಾರಿ ಕಡಪಳ ಮತ್ತು ದಿವಂಗತ ನವೀನ್ ಸಂಕೇಶ ಸ್ಮರಣಾರ್ಥ 2ನೇ ವರ್ಷದ ಬ್ರಹತ್ ರಕ್ತದಾನ ಶಿಬಿರ ಫೆ. 02ರಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕುಜಡ್ಕದಲ್ಲಿ ನಡೆಯಿತು.


ಅಮರ ಸಂಘಟನಾ ಸಮಿತಿ ಸುಳ್ಯ ಇದರ ಅಧ್ಯಕ್ಷ ಕುಸುಮಾಧರ ಮುಕ್ಕೂರು ಅಧ್ಯಕ್ಷತೆ ವಹಿಸಿದ್ದರು. ಮಿತ್ರವೃಂದ ಪೈಲಾರು ಇದರ ನಿರ್ದೇಶಕರಾದ ಜಯಂತ್ ನಾಯರಕಲ್ಲು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ, ಶುಭಹಾರೈಸಿದರು. ಮುಖ್ಯ ಅತಿಥಿಗಳಾಗಿ ಅಮರಮುಡ್ನೂರು ಗ್ರಾ.ಪಂ. ಅಧ್ಯಕ್ಷೆ ಜಾನಕಿ ಕಂದಡ್ಕ, ಸದಸ್ಯ ಜಯಪ್ರಕಾಶ್ ದೊಡ್ಡಿಹಿತ್ಲು, ಕುಕ್ಕುಜಡ್ಕ ಸ.ಹಿ.ಪ್ರಾ. ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ವಿನಯ ಸಂಕೇಶ, ಪುತ್ತೂರು ರೋಟರಿ ಕ್ಯಾಂಪ್ಕೋ ಬ್ಲಡ್‌ ಬ್ಯಾಂಕ್ ಸಾರ್ವಜನಿಕ ಸಂಪರ್ಕಾಧಿಕಾರಿ ಕುಲದೀಪ್, ತಾಂತ್ರಿಕ ಮೇಲ್ವಿಚರಕರಾದ ಬಿ.ಜೆ ಸಜನಿ ಮಾರ್ಟಿಸ್ ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭಹಾರೈಸಿದರು. ಹರ್ಷಿತ್ ದಾತಡ್ಕ ಸ್ವಾಗತಿಸಿ, ಪ್ರವೀಣ್ ಕುಲಾಲ್ ವಂದಿಸಿದರು. ಪ್ರದೀಪ್ ಬೊಳ್ಳೂರು ಕಾರ್ಯಕ್ರಮ ನಿರೂಪಿಸಿದರು.


ಅಮರ ಸಂಘಟನಾ ಸಮಿತಿಯ ಸದಸ್ಯರಾದ ಸಾತ್ವೀಕ್ ಮಡಪ್ಪಾಡಿ, ರಜನಿಕಾಂತ್ ಉಮ್ಮಡ್ಕ, ಜಯಪ್ರಸಾದ್ ಸಂಕೇಶ, ಹಿತೇಶ್ ನಾರ್ಕೊಡು, ಮಿಥುನ್ ಪೈಲಾರು, ಮನೀಶ್ ಕಡಪಳ, ಅನೀತಾ ಮಂಜುನಾಥ ಕುಕ್ಕುಜಡ್ಕ ಮತ್ತಿತರರು ಉಪಸ್ಥಿತರಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಿಗಳು ಭಾಗವಹಿಸಿದರು.