ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವರ ವರ್ಷಾವಧಿ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

0

ಫೆ.18ರಿಂದ 20ರವರೆಗೆ ನಡೆಯಲಿರುವ ಜಾತ್ರೋತ್ಸವ

ಜಾಲ್ಸೂರು ಗ್ರಾಮದ ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಪ್ರತಿಷ್ಠಾ ದಿನ ಹಾಗೂ ವರ್ಷಾವಧಿ ಜಾತ್ರೋತ್ಸವವು ಫೆ.18ರಿಂದ 20ರವರೆಗೆ ಜರುಗಲಿದ್ದು, ಫೆ.12ರಂದು ಮುಹೂರ್ತದ ಗೊನೆ ಕಡಿಯಲಾಯಿತು.

ದೇವಸ್ಥಾನದ ಆರ್ಥಿಕ ಸಮಿತಿ ಸದಸ್ಯ ದಿನೇಶ್ ಅಡ್ಕಾರು ಅವರ ತೋಟದಿಂದ ಜಾತ್ರೋತ್ಸವಕ್ಕೆ ಮುಹೂರ್ತದ ಗೊನೆ ಕಡಿಯಲಾಯಿತು.


ಈ ಸಂದರ್ಭದಲ್ಲಿ ದೇವಸ್ಥಾನದ ಮೊಕ್ತೇಸರ ಗುರುರಾಜ್ ಭಟ್ ಅಡ್ಕಾರು, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಗಣೇಶ್ ರೈ ಕುಕ್ಕಂದೂರು, ಪ್ರಧಾನ ಕಾರ್ಯದರ್ಶಿಗಳಾದ ಆತ್ಮಾನಂದ ಗಬ್ಬಲಡ್ಕ, ಗೋಪಾಲ ವಿ. ಪದವು, ಹರೀಶ ಕುಕ್ಕುಡೇಲು, ಬಾಲಕೃಷ್ಣ ಮಣಿಯಾಣಿ ಮರಸಂಕ, ಕೋಶಾಧ್ಯಕ್ಷ ವಿಜಯಕುಮಾರ್ ಕೋಡ್ತಿಲು ವಿನೋಬನಗರ, ನೂತನ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹರಿಪ್ರಕಾಶ್ ಅಡ್ಕಾರು, ವ್ಯವಸ್ಥಾಪನ ಸಮಿತಿಯ ನೂತನ ಸದಸ್ಯರುಗಳಾದ ಶ್ರೀ ಕ್ಷೇತ್ರದ ಪ್ರದಾನ ಅರ್ಚಕ ಶ್ರೀವರ ಪಾಂಗಣ್ಣಾಯ, ಪುರುಷೋತ್ತಮ ಗೌಡ ನಂಗಾರು, ಹೇಮಚಂದ್ರ ಕುತ್ಯಾಳ, ವಿಜಯಕುಮಾರ್ ನರಿಯೂರು, ವಿನೋದ್ ಕುಮಾರ್ ಮಹಾಬಲಡ್ಕ, ಶ್ರೀಮತಿ ಸೌಮ್ಯಲಕ್ಷ್ಮಿ ಬೈತಡ್ಕ, ಶ್ರೀಮತಿ ಪವಿತ್ರಭಾರತಿ ಕೋನಡ್ಕಪದವು, ಶ್ರೀಮತಿ ಸುಮತಿ ಹುಲಿಮನೆ,
ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಜಯರಾಮ ರೈ ಜಾಲ್ಸೂರು, ಶ್ರೀ ಪರಿವಾರ ದೈವಗಳ ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಮೋಹನ ನಂಗಾರು, ಪ್ರದಾನ ಕಾರ್ಯದರ್ಶಿ ಭಾಸ್ಕರ ಅಡ್ಕಾರು ಬೀರಮಂಗಲ, ಕೋಶಾಧ್ಯಕ್ಷ ಮುರಳೀಧರ ಅಡ್ಕಾರು, ಜೀರ್ಣೋದ್ಧಾರ ಸಮಿತಿ ಪ್ರದಾನ ಕಾರ್ಯದರ್ಶಿ ಶರತ್ ಅಡ್ಕಾರು, ಕಛೇರಿ ವ್ಯವಸ್ಥಾಪಕ ಹರ್ಷಿತ್ ದೇರಾಜೆ, ಉತ್ಸವ ಸಮಿತಿ ಉಪಾಧ್ಯಕ್ಷರುಗಳು, ಪದಾಧಿಕಾರಿಗಳು, ವಿವಿಧ ಬೈಲುವಾರು ಸಮಿತಿಯ ಪದಾಧಿಕಾರಿಗಳು, ಮಾಜಿ ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.