ಮಡಪ್ಪಾಡಿ ಕೆಳಗಿನ ಪೇಟೆಯ ರಸ್ತೆಯಲ್ಲಿದ್ದ ಮಣ್ಣು ಹಾಗೂ ಚರಳನ್ನು ಯುವಕ ಮಂಡಲದ ವತಿಯಿಂದ ಶ್ರಮದಾನ ಮಾಡುವುದರ ಮೂಲಕ ತೆಗೆಯಲಾಯಿತು. ಈ ಸಂದರ್ಭದಲ್ಲಿ ಮಡಪ್ಪಾಡಿ ಪ್ರಾ.ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಿನಯ್ ಕುಮಾರ್ ಮುಳುಗಾಡು, ಉಪಾಧ್ಯಕ್ಷ ಸಚಿನ್ ಬಳ್ಳಡ್ಕ, ನಿರ್ದೇಶಕ ಕರುಣಾಕರ ಪಾರೆಪ್ಪಾಡಿ ಹಾಗೂ ಯುವಕ ಮಂಡಲದ ಅಧ್ಯಕ್ಷ ಕಿರಣ್ ಶೀರಡ್ಕ, ಶ್ರೀ ರಾಮ ಭಜನಾ ಮಂಡಳಿ ಅಧ್ಯಕ್ಷ ವಿನ್ಯಾಸ ಪಾರೆಮಜಲು, ಕಾರ್ಯದರ್ಶಿ ಪ್ರೇಕ್ಷಿತ್ ಬೊಮ್ಮೆಟ್ಟಿ ಹಾಗೂ ಯುವಜನ ಸಂಯುಕ್ತ ಮಂಡಳಿ ನಿರ್ದೇಶಕ ಲೋಹಿತ್ ಬಾಳಿಕಳ ಮತ್ತಿತರರು ಉಪಸ್ಥಿತರಿದ್ದರು.
ಲಘು ಉಪಹಾರದ ವ್ಯವಸ್ಥೆಯನ್ನು ಮಡಪ್ಪಾಡಿ ಪ್ರಾ. ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಆಯೋಜಿಸಿಲಾಗಿತ್ತು