ದಾಸನಕಜೆ ಶ್ರೀ ಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ

0

ಗುಳಿಗ, ಮೊಗೇರ್ಕಳ, ಸತ್ಯದೇವತೆ ಕುಂಞಿಮಾಣಿಗ, ಕೊರಗ ತನಿಯ ದೈವಗಳ ನೇಮ

ನೆಲ್ಲೂರು ಕೆಮ್ರಾಜೆ ಗ್ರಾಮದ ದಾಸನಕಜೆ ಶ್ರೀ ದೀನದಯಾಳ್ ಎಜುಕೇಶನ್ ರೂರಲ್ ಮತ್ತು ಅರ್ಬನ್ ಡೆವಲಪ್ ಮೆಂಟ್ ಟ್ರಸ್ಟ್ ನ ಶ್ರೀ ಬ್ರಹ್ಮ ಮೊಗೇರ್ಕಳ ದೈವಸ್ಥಾನದ ಸನ್ನಿಧಿಯಲ್ಲಿ ಫೆ.,15 ಮತ್ತು ಫೆ 16 ರಂದು ದೈವಗಳ ನೇಮೋತ್ಸವವು ವಿಜೃಂಭಣೆಯಿಂದ ನಡೆಯಿತು.

ಫೆ. 15 ರಂದು ಪೂರ್ವಾಹ್ನ ಶ್ರೀ ಗಣಪತಿ ಹೋಮ,ಬಳಿಕ ಶ್ರೀ ದೈವಗಳ ಭಂಡಾರ ತೆಗೆಯಲಾಯಿತು. ಬೆಳಿಗ್ಗೆ ಶ್ರೀ ಸತ್ಯನಾರಾಯಣ ದೇವರ ಪೂಜೆ,ಮಧ್ಯಾಹ್ನ ಪ್ರಸಾದ ವಿತರಣೆ,ಅನ್ನಸಂತರ್ಪಣೆ ನಡೆಯಿತು. ಸಂಜೆ ಶ್ರೀ ದೈವಗಳ ಭಂಡಾರ ತೆಗೆಯಲಾಯಿತು. ಬಳಿಕ ಶ್ರೀ ಗುಳಿಗ ದೈವದ ನೇಮ, ಶ್ರೀ ಮೊಗೇರ್ಕಳ ದೈವಗಳ ಗರಡಿ ಇಳಿಯುವುದು ಮತ್ತು ನೇಮೋತ್ಸವ ನಡೆಯಿತು.

ರಾತ್ರಿ ಸತ್ಯದೇವತೆ ಕುಂಞಿಮಾಣಿಗ ದೈವಗಳ ನೇಮೋತ್ಸವ ನಡೆಯಿತು. ನಂತರ ಪಾತ್ರಿಗಳ ದರ್ಶನ ನಡೆದು ಪ್ರಸಾದ ವಿತರಣೆ ನಡೆಯಿತು. ಫೆ.16 ರಂದು ಬೆಳಿಗ್ಗೆ ಕಾರ್ಣಿಕ ದೈವ ಶ್ರೀ ಕೊರಗ ತನಿಯ ದೈವದ ನೇಮೋತ್ಸವ ಭಕ್ತಿ,ಸಂಭ್ರಮದಿಂದ ನಡೆಯಿತು. ಬಳಿಕ ಭಕ್ತಾದಿಗಳಿಗೆ ಪ್ರಸಾದ ವಿತರಣೆ ನಡೆಯಿತು.

ಈ ಸಂದರ್ಭದಲ್ಲಿ ಟ್ರಸ್ಟಿನ ಅಧ್ಯಕ್ಷರಾಗಿರುವ ಮಾಜಿ ಸಚಿವ ಎಸ್. ಅಂಗಾರ, ಪ್ರಧಾನ ಕಾರ್ಯದರ್ಶಿ ಬಾಬು ಹಾಸನಡ್ಕ, ಬ್ರಹ್ಮ ಮೊಗೇರ್ಕಳ ಸೇವಾ ಸಮಿತಿ ಅಧ್ಯಕ್ಷ ಕೃಷ್ಣ ಸುಳ್ಳಿ , ಪ್ರಧಾನ ಕಾರ್ಯದರ್ಶಿ ಎಸ್ .ಬಾಬು ಮೊದಲಾದವರು ಉಪಸ್ಥಿತರಿದ್ದರು.ನೂರಾರು ಭಕ್ತಾದಿಗಳು ನೇಮೋತ್ಸವದಲ್ಲಿ ಪಾಲ್ಗೊಂಡರು