ಗ್ರಾಮ ಸ್ವರಾಜ್ ಪ್ರತಿಷ್ಠಾನ ಹೊಂಬೆಳಕು ಕಾರ್ಯಕ್ರಮದಲ್ಲಿ ಪ್ರಶಸ್ತಿ – ಸನ್ಮಾನ

ಗ್ರಾಮ ಸ್ವರಾಜ್ ಪ್ರತಿಷ್ಠಾನ ಮಂಗಳೂರು ದಕ್ಷಿಣ ಕನ್ನಡ ಮತ್ತು ಹೊಂಬೆಳಕು ಸಂಘಟನಾ ಸಮಿತಿ ಇದರ ವತಿಯಿಂದ ಹೊಂಬೆಳಕು ಸ್ಥಳಿಯಾಡಳಿತದ ಸಂಭ್ರಮದ ಪ್ರಶಸ್ತಿಯನ್ನು ದ. ಕ. ಜಿಲ್ಲೆಯ ಎಂ ಜಿ ನರೆಗಾ ಯೋಜನೆಯ ಅನುಷ್ಠಾನದಲ್ಲಿ ತಾಲೂಕು ಮಟ್ಟದಲ್ಲಿ ಅತ್ಯುತ್ತಮ ಸಾಧನೆ ಮಾಡಿ ಪ್ರಥಮ ಸ್ಥಾನ ಪಡೆದಿರುವ ಐವರ್ನಾಡು ಗ್ರಾಮ ಪಂಚಾಯತ್ ಗೆ ನೀಡಿ ಗೌರವಿಸಲಾಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಲೀಲಾವತಿ ಕುತ್ಯಾಡಿ ಹಾಗೂ ಸದಸ್ಯರು ಮತ್ತು ಸಿಬ್ಬಂದಿ ವರ್ಗದವರು ಪ್ರಶಸ್ತಿಯನ್ನು ಸ್ವೀಕರಿಸಿದರು.