ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ

0

ಐವರ್ನಾಡು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಆಚರಣೆ ಫೆ.26 ರಂದು ನಡೆಯಿತು.
ಬೆಳಿಗ್ಗೆ ಪ್ರತಿಷ್ಠಾ ವಾರ್ಷಿಕೋತ್ಸವದ ಲೆಕ್ಕಪತ್ರ ಮಂಡನೆ.ಮಧ್ಯಾಹ್ನ ಗಂಟೆ ಮಹಾಪೂಜೆ,ಪ್ರಸಾದ ವಿತರಣೆ ನಡೆಯಿತು.
ಸಂಜೆ ಭಜನಾ ಕಾರ್ಯಕ್ರಮ ನಡೆಯಿತು.
ರಾತ್ರಿ ಸೇವಾರ್ಥಿಗಳಿಂದ ರಂಗಪೂಜೆ ನಡೆಯಿತು.


ಬಳಿಕ ಮಹಾಪೂಜೆ ನಡೆದು ಭಕ್ತಾದಿಗಳಿಗೆ ಪ್ರಸಾದ ವಿತರಣೆ ನಡೆಯಿತು.
ಅರ್ಚಕ ರಾಮಚಂದ್ರ ಭಟ್ ಪೂಜಾ ಕಾರ್ಯ ನೆರವೇರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರಾಜೇಶ್ ಭಟ್ ಬಾಂಜಿಕೋಡಿ, ಶಿವರಾಮ ನೆಕ್ರೆಪ್ಪಾಡಿ,ಕರುಣಾಕರ ಉದ್ದಂಪಾಡಿ,ಶ್ರೀಮತಿ ಆಶಾ ಮಡ್ತಿಲ,ಶ್ರೀಮತಿ ಶೀಲಾವತಿ ಕುಳ್ಳಂಪಾಡಿ,ರಾಧಾಕೃಷ್ಣ ಚಾಕೋಟೆ,ಮುರಳೀಧರ ಕೊಚ್ಚಿ, ವೈದಿಕ ಮುಖ್ಯಸ್ಥ ರಾಜಾರಾಮ ರಾವ್ ಉದ್ದಂಪಾಡಿ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.