ಸಂಪಾಜೆ : ವಿವಿಧ ಕಾಮಗಾರಿಗಳ ಕಾಮಗಾರಿ ಉದ್ಘಾಟನೆ

0

ಸಂಪಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗಡಿಕಲ್ಲು ಆಲಡ್ಕ ಮುಂಡಡ್ಕ ೧೪,೩೬೦೦೦ ರೂಪಾಯಿ ವೆಚ್ಚದಲ್ಲಿ ಗ್ರಾಮ ಪಂಚಾಯತ್ ಸ್ವಂತ ನಿಧಿ ೧೫ ನೇ ಹಣಕಾಸು ಉದ್ಯೋಗ ಖಾತ್ರಿ ಯೋಜನೆಯಡಿ ನಿರ್ಮಾಣಗೊಂಡ ರಸ್ತೆ ಕಾಂಕ್ರಿಟ್ ಕಾಮಗಾರಿ ಉದ್ಘಾಟನೆಯನ್ನು ಕೇಂದ್ರ ನಾರು ಮಂಡಳಿ ಮಾಜಿ ಸದಸ್ಯ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಟಿ.ಎಂ.ಶಹೀದ್ ಉದ್ಘಾಟನೆ ನೆರವೇರಿಸಿ ಮಾತನಾಡಿ, ಸಂಪಾಜೆ ಜನರ ಮೂಲಭೂತ ಅವಶ್ಯಕತೆಗಳನ್ನು ಪೂರೈಸುವ ಮೂಲಕ ೨ ಬಾರಿ ಗಾಂಧಿ ಗ್ರಾಮ ಪುರಸ್ಕಾರ ಪಡೆದಿದೆ. ಈ ಭಾಗದ ಜನ ಪ್ರತಿನಿಧಿಗಳು ಕ್ರಿಯಾಶೀಲಾರಾಗಿ ಕೆಲಸ ಮಾಡುವ ಮೂಲಕ ಅನುದಾನ ತರಿಸುವಲ್ಲಿ ಪ್ರಯತ್ನ ಮಾಡಿದ್ದಾರೆ ನಾನು ಕೂಡ ವಿಧಾನ ಪರಿಷತ್ ಸದಸ್ಯರಾದ ನಾಸಿರ್ ಅಹ್ಮದ್ ಮೂಲಕ ಗಡಿಕಲ್ಲು ಅಂಗನವಾಡಿ ಕಟ್ಟಡ ಗಡಿಕಲ್ಲು ರಸ್ತೆ ಕಾಂಕ್ರಿಟ್ ಕಾಮಗಾರಿಗೆ ಅನುದಾನ ದೊರಕಿಸಿ ಕೊಟ್ಟಿದ್ದೇನೆ. ಪೇರಡ್ಕ ದರ್ಕಸ್ ಭಾಗದಲ್ಲಿ ರಸ್ತೆ ಕಾಂಕ್ರಿಟ್ ಕಾಮಗಾರಿ, ಅಂಗನವಾಡಿ ಕೇಂದ್ರದ ಆವರಣ ಗೋಡೆ ಪೇರಡ್ಕ ಸೇತುವೆ ಕಾಮಗಾರಿ ಪೆರುಂಗೋಡಿ ರಸ್ತೆ ಡಾಮರು ಕಾಮಗಾರಿ ಮಾಡಿರುತ್ತೇನೆ. ಮುಂದೆಯೂ ಈ ಭಾಗದಲ್ಲಿ ಗ್ರಾಮದ ಸಮಗ್ರ ಅಭಿವೃದ್ಧಿಯಲ್ಲಿ ಕೈ ಜೋಡಿಸುತ್ತೇನೆ ಈಗ ಜನ ಪ್ರತಿನಿಧಿ ಅಲ್ಲದಿದ್ದರೂ ಕೆಲಸ ಮಾಡಿ ತೋರಿಸಿದ್ದೇನೆ ಮುಂದಿನ ದಿನಗಳಲ್ಲಿ ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ ಎಂದರು.

ಗಡಿಕಲ್ಲು ಅಂಗನವಾಡಿ ಕೇದ್ರಗಳಲ್ಲಿ ಹಾಗೂ ಕಲ್ಲುಗುಂಡಿ ಅಂಗನವಾಡಿ ಕೇಂದ್ರದ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಉದ್ಘಾಟನೆ ಕಾರ್ಯಕ್ರಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಸರಿತಾ ಡಿಸೋಜಾ ನೆರವೇರಿಸಿದರು. ಗ್ರಾಮ ಪಂಚಾಯತ್, ಅಧ್ಯಕ್ಷರಾದ ಸುಮಾತಿ ಶಕ್ತಿವೇಲು ಅಧ್ಯಕ್ಷತೆ ವಹಿಸಿದ್ದರು. ಆನೆಮಲ್ಲಡ್ಕ ರಸ್ತೆ ಕಾಂಕ್ರಿಟ್ ರಸ್ತೆ ಕಾಮಗಾರಿ ೩ ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಕಾಮಗಾರಿಯನ್ನು ಮಾಜಿ ಪಂಚಾಯತ್ ಅಧ್ಯಕ್ಷರಾದ ಜಗದೀಶ್ ರೈ ಉದ್ಘಾಟಿಸಿದರು ಕೈಪಡ್ಕ ಚರಂಡಿ ಕಾಂಕ್ರೀಟ್ ಕಾಮಗಾರಿ ಉದ್ಘಾಟನೆ ಯನ್ನು ತೆಂಗಿನ ಕಾಯಿ ಒಡೆಯುವ ಮೂಲಕ ಪಂಚಾಯತ್ ಸದಸ್ಯೆ ಶ್ರೀಮತಿ ವಿಮಲಾ ಪ್ರಸಾದ್ ನೆರವೇರಿಸಿದರು. ಚಟ್ಟೆಕಲ್ಲು ರಸ್ತೆ ಕಾಂಕ್ರಿಟ್ ಕಾಮಗಾರಿ ೫ ಲಕ್ಷ ರೂಪಾಯಿ ವೆಚ್ಚದಲ್ಲಿ ಮುಖ್ಯ ಮಂತ್ರಿ ಗ್ರಾಮಿಣ ಸಡಕ್ ಯೋಜನೆಯಡಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಮಂಜುನಾಥ ಭಂಡಾರಿ ಯವರ ವಿಶೇಷ ಪ್ರಯತ್ನ ಮೂಲಕ ಅನುದಾನ ದೊರಕಿಸಿ ಕಾಂಕ್ರೀಟ್ ಕಾಮಗಾರಿ ಉದ್ಘಾಟನೆ ಕಾರ್ಯಕ್ರಮ ಹಾಗೂ ಚಟ್ಟೆಕಲ್ಲು ಕಾಂಕ್ರೀಟ್ ಚರಂಡಿ ಉದ್ಘಾಟನೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀಮತಿ ಸುಂದರಿ ಹಾಗೂ ಜಿ. ಕೆ. ಹಮೀದ್ ಗೂನಡ್ಕ ನೆರವೇರಿಸಿದರು.೩ ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ಕಡೆಪಾಲ ರಸ್ತೆ ಕಾಂಕ್ರಿಟ್ ಕಾಮಗಾರಿ ಹಾಗೂ ಚರಂಡಿ ಕಾಂಕ್ರೀಟ್ ಕಾಮಗಾರಿ ಮಾಜಿ ಉಪಾಧ್ಯಕ್ಷರು ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಲಸ್ಸಿ ಮೊನಾಲಿಸಾ ಹಾಗೂ ದಿನಕರ ಗೌಡ ಸಣ್ಣಮನೆ ನೆರವೇರಿಸಿದರು ಪೆರುಂಗೋಡಿ ಪೇರಡ್ಕ ರಸ್ತೆ ಕಾಂಕ್ರಿಟ್ ರಸ್ತೆ ಹಾಗೂ ಚರಂಡಿ ಕಾಂಕ್ರೀಟ್ ಕಾಮಗಾರಿ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಕುಸುಮಾವತಿ ಪುಟ್ಟಯ್ಯ ಗೌಡ ನೆರವೇರಿಸಿದರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಿ. ಕೆ. ಹಮೀದ್ ಗೂನಡ್ಕ ಕಾರ್ಯಕ್ರಮ ನಿರೂಪಿಸಿ ಸರ್ವರನ್ನು ಸ್ವಾಗತಿಸಿದರು ಕೃಷಿ ಶಕಿ ಮೋಹಿನಿ ವಂದಿಸಿದರುಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀಮತಿ ಸುಂದರಿ,ರಜನಿ ಶರತ್, ವಿಮಲಾ ಪ್ರಸಾದ್, ವಿಜಯ ಕುಮಾರ್ ಅಲಡ್ಕ ಮಾಜಿ ಪಂಚಾಯತ್ ಸದಸ್ಯರಾದ ತಾಜ್ ಮಹಮ್ಮದ್ ಸರೋಜಿನಿ ಕಡೆಪಾಲ, ಕುಸುಮಾವತಿ ಪುಟ್ಟಯ್ಯ, ದಿನಕರ ಗೌಡ ಸಣ್ಣ ಮನೆ ಮಹಮ್ಮದ್ ಕುಂಞಿ/ಉಪ್ಪಿ ಅಬ್ದುಲ್ ರಹಿಮಾನ್ ಸಂಪಾಜೆ , ಬಿ, ಟಿ. ಬಷೀರ್, ಇಸ್ಮಾಯಿಲ್ ಏಸ್. ಪಿ , ಮಹಮ್ಮದ್ ಏಸ್ ಎಂ /ಗುಂಡು. ಹ್ಯಾರಿಸ್ ಸಂಪಾಜೆ ಪ್ರಸಾದ್ ಕಲ್ಲುಗುಂಡಿ ಅಬ್ದುಲ್ ಖಾದರ್ ಮೊಟ್ಟಂಗರ್ ಜನಾರ್ದನ ಗೌಡ ಪೇರಡ್ಕ, ವಿಶ್ವನಾಥ್ ಗೌಡ ಸರೋಜಿನಿ ಕಡೆಪಾಲ ಉಪಸ್ಥಿತರಿದ್ದರು