ನಿಂತಿಕಲ್ಲಿನಲ್ಲಿ ಚಾಮುಂಡಿ ಮತ್ತು ಗುಳಿಗ ದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವ -ಯಕ್ಷಗಾನ ಬಯಲಾಟ

0


ನಿಂತಿಕಲ್ಲಿನಲ್ಲಿ ಚಾಮುಂಡಿ ಮತ್ತು ಗುಳಿಗ ದೈವಗಳ ಪ್ರತಿಷ್ಠಾ ವಾರ್ಷಿಕೋತ್ಸವವು ಎ. 2ರಂದು ಬ್ರಹ್ಮಶ್ರೀ ವೇದಮೂರ್ತಿ ಟಿ.ಎಸ್.ಎನ್. ಕಡಮಣ್ಣಾಯ ಕುಂಬ್ಳೆ ಇವರ ನೇತೃತ್ವದಲ್ಲಿ ನಡೆಯಿತು.


ಪೂರ್ವಾಹ್ನ ಗಣಹೋಮ, ದುರ್ಗಾ ಹವನ, ಆಶ್ಲೇಷ ಬಲಿ, ಶ್ರೀ ಸತ್ಯನಾರಾಯಣ ಪೂಜೆ, ದೈವಗಳಿಗೆ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.

ರಾತ್ರಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಸೇವಾರೂಪವಾಗಿ ಶ್ರೀದೇವಿ ಮಹಾತ್ಮೆ ಎಂಬ ಯಕ್ಷಗಾನ ಬಯಲಾಟ ನಡೆಯಿತು.