ಕಳೆದ ಮೂರು ತಿಂಗಳಿನಿಂದ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜು ವಾರಕ್ಕೆ ಒಂದರಂತೆ ಸತತ ೧೨ ಸಿಇಟಿ ಮಾದರಿ ಅಣಕು ಪರೀಕ್ಷೆಗಳನ್ನು ಉಚಿತವಾಗಿ ನಡೆಸಿ, ವಿದ್ಯಾರ್ಥಿ ಮತ್ತು ಪೋಷಕರ ಮೆಚ್ಚುಗೆಗೆ ಪಾತ್ರವಾಗಿದೆ. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ), ಕಮಿಟಿ ‘ಬಿ’ ಇದರ ಅಧ್ಯಕ್ಷರಾಗಿರುವ ಡಾ. ರೇಣುಕಾಪ್ರಸಾದ್ ಕೆ.ವಿ.ಯವರ ಆಶಯದಂತೆ, ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ. ಮತ್ತು ಪ್ರಾಂಶುಪಾಲ ಡಾ. ಸುರೇಶ ವಿ. ಮಾರ್ಗದರ್ಶನದಲ್ಲಿ, ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಮುಂಬರುವ ಸಿ.ಇ.ಟಿ. ಪರೀಕ್ಷೆಗೆ ತಯಾರಿ ನಡೆಸಲು ಸಹಾಯವಾಗಲು ಕಳೆದ ಜನವರಿ ತಿಂಗಳಿಂದ ಆನ್ಲೈನ್ ಮೂಲಕ ಈ ಅಣಕು ಪರೀಕ್ಷೆಗಳನ್ನು ಆಯೋಜಿಸಲಾಗಿತ್ತು.









ದಕ್ಷಿಣ ಕನ್ನಡ, ಕೊಡಗು, ಮೈಸೂರು, ಮಂಡ್ಯ, ಹಾಸನ ಮತ್ತು ಇತರ ಜಿಲ್ಲೆಗಳ ಒಟ್ಟು ೧೬೪೫ ವಿದ್ಯಾರ್ಥಿಗಳು ಈ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು ಸುಮಾರು ೧೩೦೦ ವಿದ್ಯಾರ್ಥಿಗಳು ಈ ಪರೀಕ್ಷೆಯ ಪ್ರಯೋಜನವನ್ನು ಪಡೆದುಕೊಂಡರು. ಈ ಪರೀಕ್ಷೆಯಲ್ಲಿ ಪ್ರತಿವಾರ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಕಾಲೇಜಿನ ವತಿಯಿಂದ ೩೨ ಜಿಬಿಯ ಪೆನ್ಡ್ರೈವ್ವನ್ನು ಪ್ರೋತ್ಸಾಹಕರ ಬಹುಮಾನವಾಗಿ ನೀಡಲಾಯಿತು. ಜೂನಿಯರ್ ಕಾಲೇಜು, ರೋಟರಿ, ಅಮರಜ್ಯೋತಿ, ಶುಂಠಿಕೊಪ್ಪ, ಮಡಿಕೇರಿ, ಎನ್ನೆಂಸಿ, ಸೈಂಟ್ ಮೈಕೆಲ್ಸ್, ಸುಬ್ರಮಣ್ಯ, ಕೂಡಿಗೆ, ಫಿಲೋಮಿನಾ, ಅಂಬಿಕಾ, ವಿವೇಕಾನಂದ ಮತ್ತು ಅರಂತೋಡು ಕಾಲೇಜುಗಳ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿ ಈ ಬಹುಮಾನಗಳನ್ನು ಪಡೆದುಕೊಂಡರು.
ಕೆ.ವಿ.ಜಿ. ಸ್ಕಾಲರ್ಶಿಪ್ ಪರೀಕ್ಷೆ: ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳ ಇಂಜಿನಿಯರಿಂಗ್ ಕಲಿಕೆಗೆ ನೆರವಾಗಲು ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜ್ನ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ನೋಂದಾಯಿತ ವಿದ್ಯಾರ್ಥಿಗಳಿಗೆ ಡಾ. ಕೆ.ವಿ.ಜಿ. ವಿದ್ಯಾರ್ಥಿವೇತನ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಇದನ್ನು ಬರೆಯಲು ಏಪ್ರಿಲ್ ೩೦ ಕೊನೆಯ ದಿನವಾಗಿರುತ್ತದೆ. ಈ ಪರೀಕ್ಷೆಯಲ್ಲಿ ಆಯ್ಕೆಗೊಂಡ ವಿದ್ಯಾರ್ಥಿಗಳು ಕಾಲೇಜಿನ ಬೋಧನಾ ಶುಲ್ಕದಲ್ಲಿ ಶೆ. ೧೦೦ರ ವರೆಗೆ ರಿಯಾಯಿತಿ ಪಡೆಯಲು ಅರ್ಹರಾಗಿರುತ್ತಾರೆ. ಈ ವಿದ್ಯಾರ್ಥಿವೇತನ ಯೋಜನೆಗೆ ಸಂಸ್ಥೆಯ ಆಡಳಿತ ಮಂಡಳಿ ವಾರ್ಷಿಕ ಸುಮಾರು ೪೮ ಲಕ್ಷ ರೂಪಾಯಿ ವ್ಯಯಿಸಲಿದೆ. ಈಗಾಗಲೇ ಅಣಕು ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳು ನೇರವಾಗಿ ವಿದ್ಯಾರ್ಥಿವೇತನ ಪರೀಕ್ಷೆಯನ್ನು ಬರೆಯಬಹುದು. ಮತ್ತು ಉಳಿದವರು kvgce/scholarship ಲಿಂಕ್ ಬಳಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.










