ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬಿಸುವಿಗೆ ರಥೋತ್ಸವ

0

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪೂರ್ವಶಿಷ್ಠ ಸಂಪ್ರದಾಯದ ಪ್ರಕಾರ ಬಿಸು ಕಣಿ ಮತ್ತು ಸೌರಮಾನ ಯುಗಾದಿಯಯನ್ನು  ಏ.14 ರಂದು ಶ್ ಆಚರಿಸಲಾಯಿತು.   ಬಿಸು ಹಬ್ಬದ ಅಂಗವಾಗಿ ಕುಕ್ಕೆ ದೇವಳದಲ್ಲಿ ಆರಂಭದಲ್ಲಿ ಬಿಸು ಕಣಿಯನ್ನು ಶ್ರೀ ದೇವರಿಗೆ ದರ್ಶನ ಮಾಡಲಾಯಿತು. ಬಳಿಕ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವರಿಗೆ ಬಿಸು ರಥೋತ್ಸವ ನಡೆಯಿತು. 




ಮುಂಜಾನೆ ಶ್ರೀ ದೇವಳದ ಗರ್ಭಗೃಹದ ಮುಂಭಾಗದಲ್ಲಿ ವಿಷು ಕಣಿಯನ್ನು ಇಡಲಾಯಿತು.ಬಳಿಕ ಶ್ರೀ ದೇವರಿಗೆ ವಿಷುಕಣಿ ದರ್ಶನ ನಡೆಯಿತು. ನಂತರ ಶ್ರೀ ದೇವರ ಹೊರಾಂಗಣ ಉತ್ಸವ ನಡೆಯಿತು.ಬಳಿಕ ರಾಜಬೀದಿಯಲ್ಲಿ ಕುಕ್ಕೆಸುಬ್ರಹ್ಮಣ್ಯ ದೇವರಿಗೆ ಚಿಕ್ಕರಥೋತ್ಸವ ನೆರವೇರಿತು.ರಥೋತ್ಸವದ ಬಳಿಕ ಶ್ರೀ ದೇವಳದ ಹೊರಾಂಗಣದಲ್ಲಿರುವ ದ್ವಾದಶಿ ಮಂಟಪದಲ್ಲಿ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರಿಗೆ ಪೂಜೆ ನೆರವೇರಿತು. ಶ್ರೀ ದೇವರ ದರುಶನ ಮತ್ತು ಸೇವೆಗಳು ಉತ್ಸವದ ನಂತರ ಆರಂಭವಾಯಿತು.


ಮುನ್ನಾ ದಿನ ರಾತ್ರಿ ಮಹಾಪೂಜೆಯ ನಂತರ ವಿಷು ಪ್ರಯುಕ್ತ ಶ್ರೀ ದೇವರಿಗೆ ವಿಶೇಷ ಪಾಲಕಿ ಮತ್ತು ಬಂಡಿ ರಥೋತ್ಸವ ನೆರವೇರಿತು.ಈ ಸಂದರ್ಭ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಸೇರಿದಂತೆ ಸಹಸ್ರಾರು ಭಕ್ತರು ಉಪಸ್ಥಿತರಿದ್ದರು.

ಪೋಟೋ: ಶಾಂತಲ ಸ್ಟುಡಿಯೋ ಸುಬ್ರಹ್ಮಣ್ಯ