ಸುಬ್ರಹ್ಮಣ್ಯ ಕೆ.ಎಸ್.ಎಸ್ ಕಾಲೇಜಿನಲ್ಲಿ ಕ್ರಿಕೆಟ್ ಪಂದ್ಯಾಟ : ದ್ವಿತೀಯ ಬಿಕಾಂ ಪ್ರಥಮ, ಪ್ರಥಮ ಬಿಕಾಂ ದ್ವಿತೀಯ

0

ಸುಬ್ರಹ್ಮಣ್ಯದ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ವಿದ್ಯಾರ್ಥಿ ಪರಿಷತ್ ಮತ್ತು ಆಂತರಿಕ ಗುಣಮಟ್ಟ ಭರವಸಾ ಕೋಶದ ಸಂಯುಕ್ತ ಆಶ್ರಯದಲ್ಲಿ ದಿನಾಂಕ ಮೇ 13 ರಂದು ತರಗತಿವಾರು ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸಲಾಯಿತು.

ಪಂದ್ಯಾಟಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಡಾ. ದಿನೇಶ್ ಪಿ.ಟಿ. ಅವರು ತೆಂಗಿನಕಾಯಿ ಒಡೆಯುವ ಮೂಲಕ ಸಮಾರಂಭಕ್ಕೆ ಚಾಲನೆ ನೀಡಿದರು. ಒಟ್ಟು 10 ತಂಡಗಳು ತೀವ್ರ ಪೈಪೋಟಿಯಲ್ಲಿ ಕಣಕ್ಕಿಳಿದಿದ್ದವು. ಪಂದ್ಯಗಳ ತೀರ್ಪುಗಾರರಾಗಿ ಕಾರ್ತಿಕ್ ಬಿಳಿನೆಲೆ ನಿರ್ವಹಿಸಿದರು.

ಪಂದ್ಯದಲ್ಲಿ ದ್ವಿತೀಯ ಬಿಕಾಂ (ಎ) ತಂಡವು ಪ್ರಥಮ ಸ್ಥಾನವನ್ನು ಪಡೆಯಿತು, ದ್ವಿತೀಯ ಸ್ಥಾನವನ್ನು ಪ್ರಥಮ ಬಿಕಾಂ (ಎ) ತಂಡ ಪಡೆದುಕೊಂಡಿತು. ವೈಯಕ್ತಿಕ ಶ್ರೇಯಸ್ಕರ ಪ್ರಶಸ್ತಿಗಳಲ್ಲಿ, ಪಂದ್ಯ ಪುರುಷ ಪ್ರಶಸ್ತಿಯನ್ನು ಪ್ರಸಾದ್ (ದ್ವಿತೀಯ ಬಿಕಾಂ ಎ) ಪಡೆದರು, ಉತ್ತಮ ಬೌಲರ್ ಪ್ರಶಸ್ತಿಯನ್ನು ಸ್ನೇಹಲ್ (ಪ್ರಥಮ ಬಿಕಾಂ ಎ) ಪಡೆದರು, ಉತ್ತಮ ಬ್ಯಾಟ್ಸ್‌ಮನ್ ಪ್ರಶಸ್ತಿಯನ್ನು ಹರ್ಷಿತ್ (ದ್ವಿತೀಯ ಬಿಕಾಂ ಎ) ಗೆ ಲಭಿಸಿತು.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಡಾ. ರವಿ ಕಕ್ಕೆಪದವು ಅವರು ವಿಜೇತ ತಂಡಗಳಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭ ಪ್ರಾಂಶುಪಾಲ ಡಾ. ದಿನೇಶ್ ಪಿ.ಟಿ., ಆಂತರಿಕ ಗುಣಮಟ್ಟ ಭರವಸಾ ಕೋಶ ಸಂಯೋಜಕಿ ಶ್ರೀಮತಿ ಲತಾ ಬಿ.ಟಿ., ವಿದ್ಯಾರ್ಥಿ ಸಂಘದ ಸಂಯೋಜಕರಾದ ಡಾl ಪ್ರಸಾದ್ ಎನ್., ಸದಸ್ಯರಾದ ಶ್ರೀಮತಿ ಅಶ್ವಿನಿ ಎಸ್.ಎನ್. ಹಾಗೂ ಉಪನ್ಯಾಸಕ ವೃಂದದವರು ಉಪಸ್ಥಿತರಿದ್ದರು.