














ಬೆಳ್ಳಾರೆ ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಮಣಿಕ್ಕಾರ ಗೋಪಾಲಕೃಷ್ಣ ಶ್ಯಾನುಭಾಗ್ ಕಳೆದ ರಾತ್ರಿ (ಜು. 8) ನಿಧನರಾದರು. ಇವರಿಗೆ 86 ವರ್ಷ ವಯಸ್ಸಾಗಿತ್ತು. ಮೃತರು ಪುತ್ರರಾದ ಬೆಳ್ಳಾರೆ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನದ ಮೊಕ್ತೇಸರರಾದ ಲಕ್ಷ್ಮೀನಾರಾಯಣ ಶ್ಯಾನುಭಾಗ್, ನ್ಯಾಯವಾದಿ ಗೌರೀಶಚಂದ್ರ ಶ್ಯಾನುಭಾಗ್, ವಿದೇಶದಲ್ಲಿ ಉದ್ಯೋಗಿಯಾಗಿರುವ ಅನಿಲ್ ಶ್ಯಾನುಭಾಗ್, ಉದ್ಯಮಿ ರಾಜೇಶ್ ಶ್ಯಾನುಭಾಗ್, ಪುತ್ರಿಯರಾದ ಶ್ರೀಮತಿ ವಂದನಾ ನಾಯಕ್, ಶ್ರೀಮತಿ ಶಾಂತಾ ಕಾಮತ್ ಸೇರಿದಂತೆ ಮೊಮ್ಮಕ್ಕಳು, ಕುಟುಂಬಸ್ಥರು, ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.
ಇಂದು ಬೆಳಿಗ್ಗೆಯಿಂದ ಮಧ್ಯಾಹ್ನ 2 ಗಂಟೆಯ ತನಕ ಮೃತರ ಸ್ವಗೃಹ ಮಣಿಕ್ಕಾರದ ತುಳಸಿ ಫಾರ್ಮ್ಸ್ ನಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶವಿದ್ದು, ಬಳಿಕ ಅಂತ್ಯ ಸಂಸ್ಕಾರ ನಡೆಸಲಾಗುವುದೆಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.










