ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಪ್ರಯುಕ್ತ ಜು.24 ರಂದು ಮುಂಜಾನೆ ಶ್ರೀ ದೇವರಿಗೆ ವಿಶೇಷ ಪೂಜೆ , ಪ್ರಸಾದ ವಿತರಣೆ, ಭಕ್ತರಿಗೆ ವಿಶೇಷ ತೀರ್ಥವಾಗಿ ಹಾಲೆ ಮರದ ಕಷಾಯ ವಿತರಣೆ ನಡೆಯಿತು.
















ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ , ವ್ಯವಸ್ಥಾಪನಾ ಸಮಿತಿ ಸದಸ್ಯರು, ಸೀಮೆಯ ಭಕ್ತಾದಿಗಳು ಪಾಲ್ಗೊಂಡು ಶ್ರೀದೇವರ ಪ್ರಸಾದ ಸ್ವೀಕರಿಸಿ, ಹಾಲೆ ಮರದ ಕಷಾಯ ಸೇವಿಸಿದರು. .










