ಅನ್ಸಾರುಲ್ ಮುಸ್ಲಿಮೀನ್ ಅಸೋಸಿಯೇಷನ್ ಗಾಂಧಿನಗರ ಸುಳ್ಯ ಇದರ 57ನೇ ವಾರ್ಷಿಕ ಮಹಾಸಭೆ ಅ.1ರಂದು ಶುಕ್ರವಾರ ಮಗರಿಬ್ ನಮಾಜ್ ನಂತರ ನಡೆಯಲಿದೆ.
ಸಭೆಯನ್ನು ಸಯ್ಯದ್ ಕುಂಞಿಕೋಯ ತಂಙಳ್ ದುವಾಶಿರ್ವಚನ ಮೂಲಕ ಚಾಲನೆ ನೀಡಲಿದ್ದಾರೆ.















ಗಾಂಧಿನಗರ ಜುಮ್ಮಾ ಮಸೀದಿಯ ಖತೀಬರಾದ ಅಲ್ ಹಾಜ್ ಅಶ್ರಫ್ ಖಾಮಿಲ್ ಸಖಾಫಿ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಲಿದ್ದಾರೆ.
ಅನ್ಸಾರ್ ಅಧ್ಯಕ್ಷ ಹಾಜಿ ಅಬ್ದುಲ್ಲಾ ಕಟ್ಟೆಕ್ಕಾರ್ ಅಧ್ಯಕ್ಷತೆ ವಹಿಸಲಿದ್ದಾರೆ.
ಗಾಂಧಿನಗರ ಜಮಾಯತ್ ಕಮಿಟಿ ಅಧ್ಯಕ್ಷ ಹಾಜಿ ಮಹಮ್ಮದ್ ಕೆಎಂಎಸ್,ಅನ್ಸಾರಿಯ ಅಧ್ಯಕ್ಷ ಹಾಜಿ ಕೆ ಎಂ ಅಬ್ದುಲ್ ಮಜೀದ್ ಜನತಾ ಮುಖ್ಯ ಅತಿಥಿಗಳಾಗಿ ಬಾಗವಹಿಸಲಿದ್ದಾರೆ.
ಈ ಸಭೆಗೆ ಅನ್ಸಾರುಲ್ ಮುಸಿಮೀನ್ ಅಸೋಸಿಯೇಶನ್ ಎಲ್ಲಾ ಸದಸ್ಯರು ಬಾಗವಹಿಸಬೇಕಾಗಿ ಅನ್ಸಾರ್ ಪ್ರಧಾನ ಕಾರ್ಯದರ್ಶಿ ಬಿ.ಎಂ ಹನೀಫ್ ತಿಳಿಸಿದ್ದಾರೆ.










