ಪಂಜ: ಗರಡಿ ಬೈಲು ಮೂಲ ನಾಗನಕಟ್ಟೆಯಲ್ಲಿ ನಾಗರ ಪಂಚಮಿ

0

ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ನಾಗನ ಕಟ್ಟೆಗಳಲ್ಲಿ ಜು.29.ರಂದು ನಾಗರ ಪಂಚಮಿ ಜರುಗಿತು.

ಮುಂಜಾನೆ ದೇಗುಲದ ಸಮೀಪದ ನಾಗನ ಕಟ್ಟೆಯಲ್ಲಿ ಬಳಿಕ ಗರಡಿ ಬೈಲು ಮೂಲ ನಾಗನ ಕಟ್ಟೆಯಲ್ಲಿ ನಾಗರ ಪಂಚಮಿ ವಿವಿಧ ವೈಧಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.


ಆ ಪ್ರಯುಕ್ತ ಕ್ಷೀರಾಭಿಷೇಕ, ಎಳನೀರು ಅಭಿಷೇಕ, ಹಣ್ಣುಕಾಯಿ, ಪಂಚಾಮೃತ ಅಭಿಷೇಕ,ನಾಗ ತಂಬಿಲ ಸೇವೆಗಳು ನಡೆಯಿತು . ಅರ್ಚಕ ರಾಮಚಂದ್ರ ಭಟ್ ವೈಧಿಕ ಕಾರ್ಯಕ್ರಮ ನೆರವೇರಿಸಿ ಪ್ರಾರ್ಥಿಸಿದರು.

ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ , ವ್ಯವಸ್ಥಾಪನಾ ಸಮಿತಿ ಸದಸ್ಯರು, ಗೌರವ ಸಲಹೆಗಾರರು, ಸೀಮೆಯ ಭಕ್ತರು ಉಪಸ್ಥಿತರಿದ್ದರು.