ಆ.11 :ಐವರ್ನಾಡು ಪ್ರಾ.ಕೃ.ಪ.ಸ.ಸಂಘದಲ್ಲಿ ಅಡಿಕೆ ಮತ್ತು ಕಾಳುಮೆಣಸಿನ ಬಗ್ಗೆ ಮಾಹಿತಿ ಕಾರ್ಯಾಗಾರ

0

ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಸುಳ್ಯ ರೈತ ಉತ್ಪಾದಕಕರ ಕಂಪೆನಿ ಸುಳ್ಯ ಇದರ ಜಂಟಿ ಆಶ್ರಯದಲ್ಲಿ ಅಡಿಕೆ ಮತ್ತು ಕಾಳುಮೆಣಸಿನ ಬಗ್ಗೆ ಮಾಹಿತಿ ಕಾರ್ಯಾಗಾರವು ಆ.11 ರಂದು ಐವರ್ನಾಡು ಪ್ರಾ.ಕೃ.ಪ.ಸ.ಸಂಘದ ಸಭಾಭವನದಲ್ಲಿ ನಡೆಯಲಿದೆ.
ಬೆಳಿಗ್ಗೆ ಗಂಟೆ 10.00 ರಿಂದ ಮಾಹಿತಿ ಕಾರ್ಯಕ್ರಮ ಪ್ರಾರಂಭಗೊಳ್ಳಲಿದ್ದು ಪ್ರಗತಿಪರ ಕೃಷಿಕ ರಾಮ ಭಟ್ ಬದಂತಡ್ಕ ಉದ್ಘಾಟಿಸಲಿದ್ದಾರೆ.


ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಇಂದೋರ್ ಶ್ರೀ ಸಿದ್ಧಿ ಎಗ್ರಿ ಕಂ ಪ್ರೈವೇಟ್ ಲಿಮಿಟೆಡ್ ನ ಪೆರುವೋಡಿ ನಾರಾಯಣ ಭಟ್ ಸಂಪನ್ಮೂಲ ವ್ಯಕ್ತಿಯಾಗಿ ಮಾಹಿತಿ ನೀಡಲಿದ್ದಾರೆ.ಸುಳ್ಯ ರೈತ ಉತ್ಪಾದಕ ಸಂಘದ ಅಧ್ಯಕ್ಷ ವೀರಪ್ಪ ಗೌಡ ಕಣ್ಕಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.


ಪ್ರಗತಿಪರ ಕೃಷಿಕರಾದ ಸ್ವರ್ಣ ಶ್ರೀ ಸೌಹಾರ್ದ ಸಹಕಾರಿ ಸಂಘದ ಉಪಾಧ್ಯಕ್ಷ ಸತ್ಯನಾಯಣ ಅಚ್ರಪ್ಪಾಡಿ,ವೆಂಕಪ್ಪ ಗೌಡ ಜೆ.ಟಿ, ಜಗದೀಶ ಆಳ್ವ, ನವೀನ ಚಾತುಬಾಯಿ, ಮಹೇಶ್ ಹುಲಿಮನೆ,ಹೊನ್ನಪ್ಪ ಉದ್ದಂಪಾಡಿ,ಹರೀಶ ಪಾಪುನಡ್ಕ ರವರು ಉಪಸ್ಥಿತರಿರುವರು.
ಸಂಘದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಮಾಹಿತಿ ಕಾರ್ಯಾಗಾರದ ಸದುಪಯೋಗಪಡಿಸಿಕೊಳ್ಳಬೇಕೆಂದು ಸಂಘದ ಅಧ್ಯಕ್ಷ ಎಸ್.ಎನ್.ಮನ್ಮಥರವರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ದೀಕ್ಷಿತ್ ಎಂ.ಎಚ್ ಹಾಗೂ ನಿರ್ದೇಶಕರು ತಿಳಿಸಿದ್ದಾರೆ.